‘ತುಂಬಿದ ಕೊಡ ತುಳಕಿತಲೇ ಪರಾಕ್..’ : ಮೈಲಾರಲಿಂಗೇಶ್ವರ ಸ್ವಾಮಿಯ ದೈವವಾಣಿ

ವಿಜಯನಗರ : ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಪ್ರಸಕ್ತ ವರ್ಷದ ದೈವವಾಣಿ ಕಾರ್ಣಿಕರ ನುಡಿ ಹೊರಬಿದ್ದಿದ್ದು, ‘ತುಂಬಿದಕೊಡ ತುಳುಕೀತಲೇ ಪರಾಕ್’ ಎಂದು ಗೊರವಯ್ಯ ರಾಮಪ್ಪಜ್ಜ ಕಾರ್ಣಿಕ ನುಡಿದಿದ್ದಾರೆ.
ರಾಜ್ಯದ ಭವಿಷ್ಯವಾಣಿ ಎಂದೇ ಪರಿಗಣಿಸುವ ಮೈಲಾರಲಿಂಗೇಶ್ವರ ಕಾರ್ಣಿಕ ಕೇಳಲು
ಮೈಲಾರ ಸುಕ್ಷೇತ್ರದ ಡೆಂಕನಮರಡಿಯಲ್ಲಿ ರಾಜ್ಯ-ಹೊರ ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಅವರ ಸಮ್ಮುಖದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಭವಿಷ್ಯವಾಣಿ ಹೊರಬಿದ್ದಿದ್ದು, ಗೊರವಯ್ಯ ರಾಮಪ್ಪಜ್ಜ ” ತುಂಬಿದ ಕೊಡ ತುಳುಕಿತಲೇ ಪರಾಕ್ ಎಂದು ಭವಿಷ್ಯ ನುಡಿದಿದ್ದಾರೆ.

ಗೊರವಯ್ಯ ರಾಮಪ್ಪ ಅವರನ್ನು ಡೆಂಕನಮರಡಿಯ ಸಿಂಹಾಸನ ಕಟ್ಟೆಯಿಂದ ಕಾರ್ಣಿಕದ ಸ್ಥಳಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. ದೇಗುಲದ ವಂಶಪಾರಂಪರ್ಯ ಧರ್ಮಕರ್ತ ಗುರುವೆಂಕಪ್ಪಯ್ಯ ಒಡೆಯರ್, ಅಶ್ವಾರೂಢರಾಗಿ ಡೆಂಕನಮರಡಿಗೆ ಬರುತ್ತಿದ್ದಂತೆಯೇ ‘ಏಳು ಕೋಟಿ ಏಳು ಕೋಟಿಗೋ … ಛಾಂಗ್‌ಬಲೋ…’ ಎಂಬ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು.
ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರಿಂದ ಭಂಡಾರದ ಆಶೀರ್ವಾದ ಪಡೆದ ನಂತರ ಶುಕ್ರವಾರ ಸಂಜೆ 5:30ಕ್ಕೆ ಗೊರವಯ್ಯ ರಾಮಪ್ಪಜ್ಜ ಅವರು, ಬಿಲ್ಲನೇರಿದ ಗೊರವಯ್ಯ ರಾಮಪ್ಪಜ್ಜ ‘ತುಂಬಿದ ಕೊಡ ತುಳುಕೀತಲೇ ಪರಾಕ್’ ಎಂದು ನುಡಿದು ಕೆಳಗೆ ಧುಮುಕಿದರು. ಇದು ಶುಭ ಸೂಚಕ ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಮೈಲಾರಲಿಂಗೇಶ್ವರ ಕಾರ್ಣಿಕದಲ್ಲಿ 11 ದಿನಗಳ ಕಾಲ ಉಪವಾಸ ಇರುವ ಗೊರವಯ್ಯ 15 ಅಡಿ ಬಿಲ್ಲನೇರಿ ಕಾರ್ಣಿಕ ನುಡಿಯುತ್ತಾರೆ. ಇದನ್ನು ವರ್ಷದ ಭವಿಷ್ಯವಾಣಿ ಎಂದೇ ಪರಿಗಣಿಸಲಾಗುತ್ತದೆ. ದೈವವಾಣಿಯ ಬಗ್ಗೆ ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಣೆ ಮಾಡಿದ್ದು, ಪ್ರಸಕ್ತ ವರ್ಷ ರಾಜ್ಯ ಮತ್ತು ದೇಶದಲ್ಲಿ ಉತ್ತಮ ಮಳೆಯಾಗಲಿದೆ. ಸಮೃದ್ಧವಾಗಿ ಬೆಳೆಗಳು ಬರಲಿ ಎಂದು ವಿಶ್ಲೇಷಿಸಿದ್ದಾರೆ.
2024ರಲ್ಲಿ “ಮಳೆ ಬೆಳೆ ಎಲ್ಲಾ ಸಂಪಾದಿತಲೇ ಪರಾಕ್‌” ಎಂದು ಭವಿಷ್ಯವಾಣಿ ನುಡಿದಿದ್ದು, ಇದರಂತೆಯೇ ಉತ್ತಮ ಮಳೆಯಾಗಿದ್ದು, ಬೆಳೆಯು ಕೂಡ ಚೆನ್ನಾಗಿ ಬಂದಿವೆ. 2023ರಲ್ಲಿ ಕಾರ್ಣಿಕ “ಅಂಬಲಿ ಹಳಿಸಿತು, ಕಂಬಳಿ ಬೀಸಿತಲೇ ಪರಾಕ್” ಎಂಬ ಕಾರ್ಣಿಕ ಭವಿಷ್ಯವನ್ನು ನುಡಿದಿದ್ದರು. ಆಗ ಮಳೆ ತೀವ್ರವಾಗಿ ಕಡಿಮೆಯಾಗಿ ರಾಜ್ಯದಲ್ಲಿ ಬರಗಾಲ ಆವರಿಸಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement