ವೀಡಿಯೊ…| ಮದುವೆ ಮೆರವಣಿಗೆ ವೇಳೆ ಕುದುರೆ ಮೇಲೆ ಬರುತ್ತಿದ್ದ ಮದುಮಗ ಹೃದಯಾಘಾತದಿಂದ ಸಾವು

ಭೋಪಾಲ್: ಮಧ್ಯಪ್ರದೇಶದ ಶಿಯೋಪುರ ಜಿಲ್ಲೆಯಲ್ಲಿ 27 ವರ್ಷದ ಮದುಮಗ ತನ್ನ ಮದುವೆಯ ಮೆರವಣಿಗೆಯಲ್ಲಿ ಕುದುರೆ ಮೇಲೆ ಬರುತ್ತಿರುವಾಗಲೇ ಅಲ್ಲಿಯೇ ಕುಸಿದು ಮೃತಪಟ್ಟಿದ್ದಾನೆ.
ಶುಕ್ರವಾರ ರಾತ್ರಿ ಪ್ರದೀಪ ಜಾಟ್ ಎಂಬ ಮದುಮಗ ಜಾಟ್ ಹಾಸ್ಟೆಲಿನಲ್ಲಿ ಆಯೋಜಿಸಿದ್ದ ಮದುವೆಯ ಸ್ಥಳಕ್ಕೆ ಕುದುರೆ ಮೇಲೆ ಮೆರವಣಿಗೆಯಲ್ಲಿ ಬರುತ್ತಿರುವಾಗ ಈ ಘಟನೆ ನಡೆದಿದೆ.
ಮದುವೆಯ ಸ್ಥಳಕ್ಕೆ ಕುದುರೆ ಸವಾರಿ ಮಾಡುವ ಮೊದಲು ವರನು ‘ಬರಾತ್’ (ಮದುವೆ ಮೆರವಣಿಗೆ) ಸದಸ್ಯರೊಂದಿಗೆ ನೃತ್ಯ ಮಾಡಿದ್ದಾನೆ ಎಂದು ವರದಿಯಾಗಿದೆ. ಇತರ ಬಾರಾತಿಗಳು ನೃತ್ಯದಲ್ಲಿ ನಿರತರಾಗಿದ್ದಂತೆಯೇ, ವರನು ಕುದುರೆಯ ಮೇಲೆ ಇದ್ದಕ್ಕಿದ್ದಂತೆ ಕುಸಿದಿದ್ದಾನೆ. ಸಂಬಂಧಿಕರು ಪ್ರಜ್ಞೆ ತರಿಸಲು ಎಷ್ಟೇ ಪ್ರಯತ್ನಿಸಿದರೂ ಆತ ಇದಕ್ಕೆ ಸ್ಪಂದಿಸಲಿಲ್ಲ. ಕೂಡಲೇ ಆತನನ್ನು ಶಿಯೋಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಬರುವಷ್ಟರಲ್ಲಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಸಾಂಪ್ರದಾಯಿಕ ಉಡುಪನ್ನು ಧರಿಸಿದ ಜಾಟ್ ಕುದುರೆಯ ಮೇಲೆ ವೇದಿಕೆಯನ್ನು ಸಮೀಪಿಸುತ್ತಿರುವುದನ್ನು ಇದು ತೋರಿಸುತ್ತದೆ. ಅವನು ಕ್ರಮೇಣ ಮುಂದೆ ಬಾಗಿ ಪ್ರಜ್ಞೆ ಕಳೆದುಕೊಳ್ಳುತ್ತಾನೆಬಲ್ಲ ಮೂಲಗಳ ಪ್ರಕಾರ, ವರನಿಗೆ ಬಹುಶಃ ಇದಕ್ಕಿದ್ದಂತೆ ಹೃದಯಾಘಾತ ಸಂಭವಿಸಿದೆ ಮತ್ತು ಕುದುರೆಯ ಮೇಲೆ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ.
ಪ್ರದೀಪ ಜಾಟ್‌ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಮದುವೆಯಾಗಲಿದ್ದರು, ಅವರು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ (NSUI) ಷಿಯೋಪುರದ ಮಾಜಿ ಜಿಲ್ಲಾ ಅಧ್ಯಕ್ಷರಾಗಿದ್ದರು ಎಂದು ವರದಿಯಾಗಿದೆ.

ಪ್ರದೀಪ ಜಾಟ್‌ ಚಿಕ್ಕಪ್ಪ ಯೋಗೇಶ ಜಾಟ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ.
ಮದುವೆಯ ದಿರಿಸು ತೊಟ್ಟಿದ್ದ ವರನು ಕುದುರೆಯ ಮೇಲೆ ಕುಸಿದು ಬೀಳುತ್ತಿರುವುದನ್ನು ತೋರಿಸುವ ಆಘಾತಕಾರಿ ಘಟನೆಯ ವೀಡಿಯೊ ವೈರಲ್ ಆಗಿದೆ.
ವಿದಿಶಾ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆಯ ಆರು ದಿನಗಳ ನಂತರ ಈ ಘಟನೆ ಸಂಭವಿಸಿದೆ, ಇಂದೋರ್‌ನ 23 ವರ್ಷದ ಪರಿಣಿತಾ ಜೈನ್ ಎಂಬ ಮಹಿಳೆ ತನ್ನ ಸೋದರಸಂಬಂಧಿಯ ವಿವಾಹ ಸಂಬಂಧಿತ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುವಾಗ ಹೃದಯ ಸ್ತಂಭನದಿಂದ ಕುಸಿದು ಮೃತಪಟ್ಟಿದ್ದಳು.

ಪ್ರಮುಖ ಸುದ್ದಿ :-   ನಲ್ಲಿ ನೀರು ವಿವಾದ: ಕೇಂದ್ರ ಸಚಿವರ ಇಬ್ಬರು ಸೋದರಳಿಯಂದಿರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement