ಮುಂಬೈ : ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಮತ್ತು ಪತ್ನಿ ಧನಶ್ರೀ ವರ್ಮಾ ಅವರು ತಮ್ಮ ವಿಚ್ಛೇದನವನ್ನು ಅಂತಿಮಗೊಳಿಸಿದ್ದಾರೆ.
ಎಬಿಪಿ ನ್ಯೂಸ್ ಪ್ರಕಾರ, ದಂಪತಿಯನ್ನು ಮುಂಬೈನ ಬಾಂದ್ರಾದಲ್ಲಿರುವ ಕೌಟುಂಬಿಕ ನ್ಯಾಯಾಲಯದ ಮುಂದೆ ಕರೆಸಲಾಗಿದೆ, ಅಲ್ಲಿ ಅವರು ಅಂತಿಮ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ, ನಂತರ ಅವರು ತಮ್ಮ ಅಧಿಕೃತ ವಿಚ್ಛೇದನ ಪ್ರಮಾಣಪತ್ರವನ್ನು ಪಡೆಯುತ್ತಾರೆ. ಪರಸ್ಪರ ಒಪ್ಪಿಗೆಯ ಮೂಲಕ ಬೇರೆಯಾಗುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಕೀಲರ ಮೂಲವನ್ನು ಉಲ್ಲೇಖಿಸಿ ಅದು ವರದಿ ಮಾಡಿದೆ.
ವಾಸ್ತವವಾಗಿ ಬಹಳ ದಿನಗಳಿಂದ ಇಬ್ಬರೂ ಬೇರೆಯಾಗಿ ಪ್ರತ್ಯೇಕವಾಗಿ ವಾಸಿಸಲಾರಂಭಿಸಿದ್ದರು. ಅಲ್ಲದೆ ಇಷ್ಟರಲ್ಲೇ ಈ ಇಬ್ಬರು ಅಧಿಕೃತವಾಗಿ ದೂರವಾಗಲಿದ್ದಾರೆ ಎಂಬ ವರದಿಗಳು ಆಗಾಗ್ಗೆ ಕೇಳಿ ಬರುತ್ತಿದ್ದವು. ಈಗ ಈ ಸುದ್ದಿ ದೃಢಪಟ್ಟಂತೆ ತೋರುತ್ತಿದ್ದು, ಚಾಹಲ್-ಧನಶ್ರೀ ನಡುವಿನ ದಾಂಪತ್ಯ ಜೀವನ ಕೇವಲ 4 ವರ್ಷಗಳಿಗೆ ಅಂತ್ಯಗೊಂಡಿದೆ.
ಯುಜ್ವೇಂದ್ರ ಚಾಹಲ್ ಗುರುವಾರ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ನಿಗೂಢ ಪೋಸ್ಟ್ ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಅನ್ನು ನೋಡಿದರೆ ಚಾಹಲ್ ಅವರ ಜೀವನದಲ್ಲಿ ಏನೋ ದೊಡ್ಡ ಘಟನೆ ನಡೆದಿದೆ ಎಂಬುದನ್ನು ಊಹಿಸಬಹುದು. ಚಾಹಲ್ ತಮ್ಮ ಪೋಸ್ಟ್ನಲ್ಲಿ ‘ದೇವರು ನನ್ನನ್ನು ಎಷ್ಟೋ ಬಾರಿ ರಕ್ಷಿಸಿದ್ದಾನೆ, ನಾನು ಅವುಗಳನ್ನು ಸಂಖ್ಯೆಯಲ್ಲಿ ಎಣಿಸಲು ಸಹ ಸಾಧ್ಯವಿಲ್ಲ’. ಕೆಲವೊಮ್ಮೆ ದೇವರು ನನ್ನ ಅರಿವಿಗೆ ಬಾರದೆಯೋ ನನ್ನ ಜೊತೆ ನಿಂತಿದ್ದಾನೆ. ನನಗೆ ಗೊತ್ತಿಲ್ಲದಿದ್ದರೂ ನನ್ನನ್ನು ಬೆಂಬಲಿಸಿದ್ದಕ್ಕಾಗಿ ದೇವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ