ಕೋಲ್ಕತ್ತಾ : ಭಾರತ ತಂಡದ ಮಾಜಿ ನಾಯಕ ಸೌರವ ಗಂಗೂಲಿ ಗುರುವಾರ (ಫೆಬ್ರವರಿ 20) ರಾತ್ರಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಅವರು ಪಶ್ಚಿಮ ಬಂಗಾಳದ ಬರ್ದ್ವಾನ್ಗೆ ತೆರಳುತ್ತಿದ್ದಾಗ ದಂತನಪುರದ ದುರ್ಗಾಪುರ ಎಕ್ಸ್ಪ್ರೆಸ್ವೇಯಲ್ಲಿ ಈ ಘಟನೆ ನಡೆದಿದೆ.
ಅವರ ಕಾರು ಅಪಘಾತಕ್ಕೀಡಾಗಿದ್ದು, ಕಾರು ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.
ಗಂಗೂಲಿ ತಮ್ಮ ರೇಂಜ್ ರೋವರ್ನಲ್ಲಿ ಹೋಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಯಿತು. ಎಕ್ಸ್ಪ್ರೆಸ್ವೇಯಲ್ಲಿ ಗಂಗೂಲಿ ಅವರ ಬೆಂಗಾವಲು ವಾಹನವನ್ನು ಲಾರಿಯೊಂದು ಹಠಾತ್ತನೆ ಹಿಂದಿಕ್ಕಿತು, ಆಗ ಚಾಲಕ ಬ್ರೇಕ್ ಹಾಕಬೇಕಾಯಿತು.
ಇದರಿಂದ ಗಂಗೂಲಿ ಅವರ ವಾಹನದ ಹಿಂದಿನ ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದವು. ಅದರಲ್ಲಿ ಒಂದು ವಾಹನ ಗಂಗೂಲಿ ಕಾರಿಗೂ ಡಿಕ್ಕಿ ಹೊಡೆಯಿತು ಎಂದು ಹೇಳಲಾಗಿದೆ.
ಅದೃಷ್ಟವಶಾತ್, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಅಥವಾ ಸಾವುನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ವಾಸ್ತವವಾಗಿ, ಗಂಗೂಲಿ ಅವರ ಕಾರಿನ ವೇಗವು ಹೆಚ್ಚಿರಲಿಲ್ಲ ಎಂದು ಹೇಳಲಾಗುತ್ತಿದೆ ಮತ್ತು ಚಾಲಕ ತಕ್ಷಣ ಬ್ರೇಕ್ ಹಾಕಿದ್ದು ದೊಡ್ಡ ಅನಾಹುತವನ್ನು ತಪ್ಪಿಸಿದೆ.
ಘಟನೆಯಿಂದಾಗಿ ಗಂಗೂಲಿ ಸುಮಾರು10 ನಿಮಿಷಗಳ ಕಾಲ ರಸ್ತೆಯಲ್ಲಿ ಕಾಯಬೇಕಾಯಿತು. ನಂತರ ಅವರು ಬುರ್ದ್ವಾನ್ ವಿಶ್ವವಿದ್ಯಾನಿಲಯದ ನಿಗದಿತ ಸಮಾರಂಭದಲ್ಲಿ ಭಾಗವಹಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ