ಜನ್ಮದಿನದಂದು ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲು

ಗದಗ: ಜನ್ಮದಿನದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ನಂತರ ತುಂಗಭದ್ರಾ ನದಿಗೆ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ನೀರು ಪಾಲಾದ ಘಟನೆ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮದಲಗಟ್ಟಿ ಬಳಿ ನಡೆದಿದೆ ಎಂದು ವರದಿಯಾಗಿದೆ.
ನೀರಪಾಲಾದವರನ್ನು ಗದಗ ಜಿಲ್ಲೆಯ ಶಿರಹಟ್ಟಿಯ ಶರಣಪ್ಪ ಬಡಿಗೇರ (34), ಮಹೇಶ (36) ಮತ್ತು ಗುರುನಾಥ (38) ಎಂದು ಗುರುತಿಸಲಾಗಿದೆ. ಶರಣಪ್ಪ ನಾಲ್ವರು ಸ್ನೇಹಿತರೊಂದಿಗೆ ಮದಲಗಟ್ಟಿ ಆಂಜನೇಯನದೇವಸ್ಥಾನಕ್ಕೆ ಬಂದಿದ್ದಾರೆ. ಆಂಜನೇಯನ ದರ್ಶನ ಪಡೆದು ಬಳಿಕ ನದಿಗೆ ಈಜಲು ತೆರಳಿದ್ದರು. ಈಜಲು ಬಾರದಿದ್ದರೂ ಶರಣಪ್ಪನ ಸ್ನೇಹಿತ ಮಹೇಶ ನದಿಗೆ ಇಳಿದಿದ್ದರು ಎನ್ನಲಾಗಿದೆ. ನೀರಿನ ಸೆಳೆತಕ್ಕೆ ಸಿಲುಕಿದ್ದ ಮಹೇಶ ಅವರನ್ನು ರಕ್ಷಿಸಲು ಶರಣಪ್ಪ ಹಾಗೂ ಗುರುನಾಥ ಮುಂದಾಗಿದ್ದಾರೆ. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಮೂವರು ನೀರು ಪಾಲಾಗಿದ್ದಾರೆ ಎಂದು ಹೇಳಲಾಗಿದೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದವರು ಶೋಧಕಾರ್ಯ ನಡೆಸಿದ್ದಾರೆ.
R

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement