ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಅಕ್ರಮದ ತನಿಖೆ ವೇಳೆ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ವಕೀಲೆ ಜೀವಾ ತನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ರಾಜ್ಯ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್ ನೋಟ್ ಮೂಲಕ ಆರೋಪಿಸಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ನಂತರ 2024 2024ರ ನವೆಂಬರ್ 22 ರಂದು ಬನಶಂಕರಿ ಪೊಲೀಸರು ಕನಕ ಲಕ್ಷ್ಮಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 (ಎ) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿಂದೆ ಎಸ್‌ಐಟಿ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ದಾಖಲು ಮಾಡಿತ್ತು. ಮಂಗಳವಾರ ಬೆಳಗ್ಗೆ ಮತ್ತೊಮ್ಮೆ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಬಂಧಿಸಲಾಗಿದೆ

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement