ಭೂಸ್ವಾಧೀನ ಪರಿಹಾರ ನೀಡದ ಆಡಳಿತ ; ಹಾವೇರಿ ಜಿಲ್ಲಾಧಿಕಾರಿ ಕಾರು ಜಪ್ತಿ

ಹಾವೇರಿ: ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ನಂತರ ಹಾವೇರಿ ಜಿಲ್ಲಾಧಿಕಾರಿಗಳ ಕಾರನ್ನೇ ಜಪ್ತಿ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ರುದ್ರಪ್ಪ ಬಸಪ್ಪ ಗುತ್ತಲ ಎಂಬವರ ಜಮೀನನ್ನು 1970ರಲ್ಲಿ ಸರ್ಕಾರದಿಂದ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲಾಧಿಕಾರಿಗಳು 2 ಎಕರೆ 29 ಗುಂಟೆ ಜಮೀನು ಭೂಸ್ವಾಧೀನಪಡಿಸಿಕೊಂಡು ಬಳಿಕ ಸಣ್ಣ ನೀರಾವರಿ ಇಲಾಖೆಗೆ ಜಮೀನು ಹಸ್ತಾಂತರಿಸಿದ್ದರು. ಭೂಸ್ವಾಧೀನಪಡಿಸಿಕೊಂಡು 55 ವರ್ಷ ವರ್ಷ ಕಳೆದರೂ ಪರಿಹಾರ ನೀಡಿರಲಿಲ್ಲ. ಈ ಬಗ್ಗೆ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಸಂತ್ರಸ್ತೆ ಶಿವಕ್ಕ ಗುತ್ತಲ ಅವರು ಪ್ರಶ್ನೆ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಬಡ್ಡಿ ಸಮೇತ 45.80 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ನ್ಯಾಯಾಲಯ ಆದೇಶ ಮಾಡಿತ್ತು. ಕಳೆದ ವರ್ಷ ನವೆಂಬರ್ 23ರಂದು ಪರಿಹಾರ ನೀಡುವುದಾಗಿ ಲಿಖಿತ ಪತ್ರ ನೀಡಲಾಗಿತ್ತು. ಆದರೆ ಈವರೆಗೆ ಶಿವಕ್ಕ ಗುತ್ತಲ ಅವರಿಗೆ ಪರಿಹಾರ ಸಂದಾಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡಲು ಆದೇಶ ನೀಡಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement