ಬೆಳಗಾವಿ: ಬೆಳಗಾವಿ ಕೆಎಲ್ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿದ್ದಾರೆ. ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದಿದೆ.
ಕಾರಿನ ಒಳಗೆ ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು.
ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದವರನ್ನು ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಒಯ್ಯಲಾಗಿದೆ.
ಕೇವಲ 15 ನಿಮಿಷದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಜನರು, ಎರಡು ಕ್ರೇನ್ ಬಳಸಿ ಕಾರ್ನಲ್ಲಿದ್ದವರನ್ನು ರಕ್ಷಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.
ರಕ್ಷಣೆ ಮಾಡಲ್ಪಟ್ಟ ಮೂವರ ಪೈಕಿ ಇಬ್ಬರನ್ನು ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಬೆಳಗಾವಿಗೆ ಬರುವಾಗ ಸಂಬಂಧಿಗಳ ಬರುವುದಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾಯುತ್ತಿದ್ದರು ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ