ಮೈಸೂರು: ಕಾವೇರಿ ನದಿಯಲ್ಲಿ ಇಬ್ಬರು ಮೊಮ್ಮಕ್ಕಳು ಮತ್ತು ಅಜ್ಜ ನೀರು ಪಾಲಾದ ಘೋರ ದುರಂತ ಮೈಸೂರಿನ ಜಿಲ್ಲೆಯ ತಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಅಜ್ಜ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ ಎನ್ನಲಾಗಿದೆ.
ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ ಚೌಡಯ್ಯ (70) , ಭರತ್ (13) ಮತ್ತು ಧನುಷ್ (10) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಕಳು ಕರು ಹಾಕಿದ್ದು, ಅದರ ತ್ಯಾಜ್ಯ ಚೆಲ್ಲಲು ಅವರು ನದಿ ತೀರಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಇಬ್ಬರು ಮೊಮ್ಮಕ್ಕಳು ನದಿಗೆ ಇಳಿದಿದ್ದು, ಆಕಸ್ಮಾತ್ ಮುಳುಗಿದ್ದಾರೆ. ಅವರನ್ನು ಕಾಪಾಡಲು ನೀರಿಗೆ ಧುಮುಕಿದ ಅಜ್ಜ ಸಹ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದ್ದು, ಟಿ.ನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಮ್ಮ ಕಾಮೆಂಟ್ ಬರೆಯಿರಿ