ಚಿತ್ರದುರ್ಗ | ಆರತಕ್ಷತೆ ಭೋಜನದ ವೇಳೆ ಕುಡಿಯುವ ನೀರಿನ ವಿಚಾರಕ್ಕೆ ಜಗಳ ; ಮದುವೆಯೇ ರದ್ದಾಯ್ತು…!

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ನಡೆದ ಗಲಾಟೆಯಿಂದಾಗಿ ಮದುವೆಯೇ ಮುರಿದು ಬಿದ್ದ ಘಟನೆ (Wedding Cancelled) ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ದಾವಣಗೆರೆ ಜಿಲ್ಲೆ ಜಗಳೂರಿನ ವರ ಹಾಗೂ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿಯ ವಧುವಿನ ವಿವಾಹ ಅರತಕ್ಷತೆ ಸಮಾರಂಭ ಹಿರಿಯೂರಿನ ಬಲಿಜ ಶ್ರೇಯಾ ಭವನದಲ್ಲಿ ಶನಿವಾರ ರಾತ್ರಿ ನಡೆಯಿತು. ತಡವಾಗಿ ಬಂದ ಕೆಲವರು ಊಟಕ್ಕೆ ಕುಳಿತಿದ್ದ ವೇಳೆ ಕ್ಯಾಟರಿಂಗ್ ಸಿಬ್ಬಂದಿ ಸರಿಯಾಗಿ ಕುಡಿಯುವ ನೀರು ವಿತರಿಸಿಲ್ಲ ಎನ್ನುವ ಕಾರಣಕ್ಕೆ ವಧುವಿನ ಕಡೆಯವರು ಹಾಗೂ ವರನ ಕಡೆಯವರ ನಡುವೆ ಮಾತಿಗೆ ಮಾತು ಬೆಳೆದು ಜಗಳದ ವರೆಗೆ ಹೋಗಿದೆ.
ಭಾನುವಾರ ಬೆಳಿಗ್ಗೆ ವರೆಗೂ ಜಗಳ ಮುಂದುವರಿದಿದ್ದು, ಹಿರಿಯರು ಎಷ್ಟೇ ಸಂಧಾನ ನಡೆಸಿದರೂ ಪ್ರಯತ್ನ ಅದು ಫ ನೀಡದೆ ಹೋಯಿತು. ಭಾನುವಾರ ಬೆಳಗ್ಗೆ 10:30 ಕ್ಕೆ ಮುಹೂರ್ತ ನಿಗದಿಯಾಗಿತ್ತು. ಆ ಮುಹೂರ್ತಕ್ಕೆ ಮದುವೆ ಮಾಡಿಸಲು ಹಿರಿಯರು, ಸಂಬಂಧಿಕರು ಸಂಧಾನ ನಡೆಸಿ ಎಷ್ಟೇ ಪ್ರಯತ್ನಿಸಿದರೂ ಏನೂ ಪ್ರಯೋಜನವಾಗಲಿಲ್ಲ, ಹೀಗಾಗಿ ಮದುವೆ ಮುರಿದು ಬಿದ್ದಿದೆ. ಎಂಜಿನಿಯರಿಂಗ್ ಪದವೀಧರರಾಗಿರುವ ವಧು ಹಾಗೂ ವರ ಸಹ ಜಗಳದಲ್ಲಿ ಪಾಲ್ಗೊಂಡಿದ್ದ ಕಾರಣ ಹಾಗೂ ಯಾರೂ ಹೊಂದಿಕೊಳ್ಳಲು ಒಪ್ಪದ ಕಾರಣ ಕಾರಣ ಮದುವೆ ನಿಂತು ಹೋಗಿದೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement