ಚನ್ನಗಿರಿ | ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ನೀರು ಪಾಲು

ದಾವಣಗೆರೆ:  ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ
ಮೃತರನ್ನು ದೀಪಾ(28), ದಿವ್ಯಾ (26) ಹಾಗೂ ಚಂದನಾ(19) ಎಂದು ಹೇಳಲಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ. ಚನ್ನಗಿರಿ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೈಯಿಂದ ಕೆರೆಗೆ ಬಿದ್ದು ತೇಲಿ ಹೋಗುತ್ತಿದ್ದ ಬಟ್ಟೆಯನ್ನು ಹಿಡಿಯಲು ಆಳದ ಬಗ್ಗೆ ಅರಿವಿರದ ಓರ್ವ ಮಹಿಳೆ ಇಳಿದಾ ಅವಳು ಮುಳುಗಲಾರಂಭಿಸಿದ್ದಾರೆ. ಆಗ ಅಚರ ಚೀರಾಟ ಕೇಳಿ ಉಳಿದಿಬ್ಬರು ಅವರ ರಕ್ಷಣೆಗೆ ನೀರಿಗೆ ಧುಮುಕಿದ್ದು, ಮೇಲೆ ಬರಲು ಸಾಧ್ಯವಾಗದೆ ಮೂವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ.
ಮಾಹಿತಿ ಗೊತ್ತಾದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನು ಕೆರೆಯಿಂದ ಹೊರಕ್ಕೆ ತೆಗೆದಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ತಹಶೀಲ್ದಾರ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement