ಕಾರ್ಕಳ | ಮೂಲ ಸ್ಥಾನ ಎರ್ಲಪಾಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರೀ

ಉಡುಪಿ : ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ಹಾಗೂ ಭಾರತದ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ (Ravi Shastri) ಅವರು ತಮ್ಮ ಕುಟುಂಬದ ಮೂಲ ಸ್ಥಾನವಾದ ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ನಾಗಸನ್ನಿಧಿಗೂ ವಿಶೇಷ ಪೂಜೆ ಸಲ್ಲಿಸಿದರು.
ಹಲವು ವರ್ಷಗಳಿಂದ ಮಕ್ಕಳಾಗದೇ ಇದ್ದಾಗ 2007ರಲ್ಲಿ ರವಿಶಾಸ್ತ್ರಿ ದಂಪತಿ ಇಲ್ಲಿಗೆ ಮೊದಲ ಬಾರಿಗೆ ಭೇಟಿ ನೀಡಿ ನಾಗಬನದಲ್ಲಿ ಪೂಜೆಗೈದಿದ್ದರು. ಇದಾದ ಮರು ವರ್ಷವೇ ಈ ದಂಪತಿಗೆ ಮಗುವಾಯಿತು. ಇದರ ನಂತರದಿಂದ ರವಿ ಶಾಸ್ತ್ರಿ ಅವರು ವರ್ಷಕ್ಕೊಮ್ಮೆ ಭೇಟಿ ನೀಡಿ ಇಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಲೇ ಬರುತ್ತಿದ್ದಾರೆ.

ರವಿ ಶಾಸ್ತ್ರೀ ಭೇಟಿ ನೀಡಿದ ವೇಳೆ ಬೈಲೂರು ಎರ್ಲಪಾಡಿ ಕರ್ವಾಲು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಅನಂತ ಪಟ್ಟಾಭಿ ರಾವ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಭೋಜ ಶೆಟ್ಟಿ, ಪ್ರಮುಖರಾದ ಸಂದೀಪ ಶೆಟ್ಟಿ, ಸುಧಾಕರ ಹೆಗ್ಡೆ, ಪ್ರಶಾಂತ ಶೆಟ್ಟಿ, ದಿಲೀಪ್ ಶೆಟ್ಟಿ, ತಂತ್ರಿಗಳಾದ ವರದರಾಜ ತಂತ್ರಿ, ಹರಿಶ್ಚಂದ್ರ ರಾವ್, ರವಿಶಾಸ್ತ್ರೀ ಕುಟುಂಬಸ್ಥರು ಉಪಸ್ಥಿತರಿದ್ದರು.
ರವಿ ಶಾಸ್ತ್ರಿಯವರ ಪೂರ್ವಜರು ಎರ್ಲಪಾಡಿಯ ಕರ್ವಾಲುಗೆ ಸೇರಿದವರು.  ಮುಂಬೈಯಲ್ಲೇ ಬೆಳೆದ ರವಿಶಾಸ್ತ್ರಿ ಅಲ್ಲೇ ಶಿಕ್ಷಣ ಪಡೆದು ದೇಶದ ಕ್ರಿಕೆಟ್ ತಂಡಕ್ಕೆ ಸೇರ್ಪಡೆಯಾಗಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement