ಹಂಪಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

ಹೊಸಪೇಟೆ: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅವರಲ್ಲಿ ಓರ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ಬುಧವಾರ ವಿಷ ಸೇವಿಸಿದ್ದು, ಇವರಲ್ಲಿ ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ (38), ಪುತ್ರಿ ಭವಾನಿ (12), ಶಿವು (10) ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಆತ್ಮಹತ್ಯೆ ಯತ್ನಕ್ಕೆ ಸಾಕ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೆ ಯತ್ನಿಸಿದ ಮೂವರನ್ನು ಆಸ್ಪತ್ರೆಗೆ ದಾಖಲಾಗಿದೆ. ಈ ಸಂಬಂಧ ಹಂಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement