ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರಿಗೆ ಮುಂಬೈ ಕೌಟುಂಬಿಕ ನ್ಯಾಯಾಲಯ ಗುರುವಾರ ವಿಚ್ಛೇದನದ ತೀರ್ಪು ನೀಡಿದೆ.
ಸುಮಾರು ಎರಡೂವರೆ ವರ್ಷಗಳಿಂದ ಬೇರೆ ಬೇರೆ ವಾಸುತ್ತಿದ್ದ ಈ ಜೋಡಿಯ ವಿಚ್ಛೇದನ ಮೇಲ್ಮನವಿಯನ್ನು ಬಾಂದ್ರಾದ ಕೌಟುಂಬಿಕ ನ್ಯಾಯಾಲಯ ಅಂಗೀಕರಿಸಿದೆ. ಇದರೊಂದಿಗೆ, ಪ್ರೀತಿಸಿ ವೈವಾಹಿಕ ಜೀವಕ್ಕೆ ಕಾಲಿಟ್ಟಿದ್ದ ಈ ಪ್ರಣಯ ಪಕ್ಷಿಗಳ ದಾಂಪತ್ಯ ಜೀವನ ಅಂತ್ಯಗೊಂಡಿದೆ.
ಚಾಹಲ್ ಅವರ ವಕೀಲ ನಿತಿನಕುಮಾರ ಗುಪ್ತಾ ಅವರು ನ್ಯಾಯಾಲಯದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುವಾಗ ಇದನ್ನು ಖಚಿತಪಡಿಸಿದ್ದಾರೆ. “ನ್ಯಾಯಾಲಯವು ವಿಚ್ಛೇದನದ ತೀರ್ಪು ನೀಡಿದೆ. ನ್ಯಾಯಾಲಯವು ಎರಡೂ ಪಕ್ಷಗಳ ಜಂಟಿ ಅರ್ಜಿಯನ್ನು ಸ್ವೀಕರಿಸಿದೆ. ಕಕ್ಷಿದಾರರು ಇನ್ನು ಮುಂದೆ ಪತಿ-ಪತ್ನಿಗಳಾಗಿರುವುದಿಲ್ಲ” ಎಂದು ವಕೀಲ ನಿತಿನ್ ಹೇಳಿದ್ದಾರೆ.
ಚಹಾಲ್ ಮತ್ತು ಧನಶ್ರೀ ವರ್ಮಾ ಡಿಸೆಂಬರ್ 2020 ರಲ್ಲಿ ವಿವಾಹವಾದರು. ಅವರ ಅರ್ಜಿಯ ಪ್ರಕಾರ, ಅವರು ಜೂನ್ 2022 ರಲ್ಲಿ ಬೇರ್ಪಟ್ಟರು. ಫೆಬ್ರವರಿ 5 ರಂದು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕಾಗಿ ಕುಟುಂಬ ನ್ಯಾಯಾಲಯದ ಮುಂದೆ ಜಂಟಿ ಅರ್ಜಿಯನ್ನು ಸಲ್ಲಿಸಿದರು.
ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಮೆಂಟ್ನಲ್ಲಿ ಚಾಹಲ್ ಭಾಗವಹಿಸುವುದರಿಂದ ನಂತರ ಲಭ್ಯವಿರುವುದಿಲ್ಲ ಎಂಬ ಅಂಶವನ್ನು ಪರಿಗಣಿಸಿ ಬಾಂಬೆ ಹೈಕೋರ್ಟ್ ಬುಧವಾರ ವಿಚ್ಛೇದನ ಅರ್ಜಿಯನ್ನು ಗುರುವಾರದೊಳಗೆ ನಿರ್ಧರಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ಸೂಚಿಸಿತ್ತು. ಮಾರ್ಚ್ 22 ರಿಂದ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಾವಳಿ ಆರಂಭವಾಗಲಿದ್ದು, ಚಾಹಲ್ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿಚ್ಛೇದನದ ಅರ್ಜಿಯನ್ನು ಸಲ್ಲಿಸಿದ ನಂತರ ಪ್ರತಿ ದಂಪತಿಗಳಿಗೆ ನಿಗದಿಪಡಿಸಿದ ಆರು ತಿಂಗಳ ಕೂಲಿಂಗ್ ಅವಧಿಯನ್ನು ಹೈಕೋರ್ಟ್ ಬುಧವಾರ ಮನ್ನಾ ಮಾಡಿದೆ. ಕ್ರಿಕೆಟಿಗ ಮತ್ತು ವರ್ಮಾ ಅವರು ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದರಿಂದ ತಮ್ಮ ಪ್ರಕರಣದಲ್ಲಿ ಕೂಲಿಂಗ್-ಆಫ್ ಅವಧಿಯನ್ನು ಮನ್ನಾ ಮಾಡಬೇಕು ಎಂದು ಕೋರಿ ಹೈಕೋರ್ಟ್ಗೆ ಜಂಟಿ ಅರ್ಜಿ ಸಲ್ಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ