ನ್ಯಾಯಮೂರ್ತಿಗಳ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಆರೋಪ : ಆಂತರಿಕ ತನಿಖೆಗೆ ಮುಂದಾದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್‌(Delhi High Court) ನ್ಯಾಯಮೂರ್ತಿ ಯಶವಂತ ವರ್ಮಾ(Yashwant Verma) ಅವರ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡದ ವೇಳೆ ಅವರ ಅಧಿಕೃತ ನಿವಾಸದಲ್ಲಿ ಹಣದ ರಾಶಿಯೇ ಪತ್ತೆಯಾಗಿದೆ.
ಅಧಿಕೃತ ಬಂಗಲೆಯಲ್ಲಿ ಲೆಕ್ಕಕ್ಕೆ ಸಿಗದ ಹಣದ ರಾಶಿ ಪತ್ತೆಯಾದ ನಂತರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರು ಈಗ ವಿವಾದದ ಕೇಂದ್ರಬಿಂದುವಾಗಿದ್ದಾರೆ.
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರ ಅಧಿಕೃತ ಬಂಗಲೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗೆ ಲೆಕ್ಕಕ್ಕೆ ಸಿಗದಷ್ಟು ಹಣ ಪತ್ತೆಯಾಗಿದ್ದು, ಈ ವೇಳೆ ನ್ಯಾಯಮೂರ್ತಿಗಳ ಕುಟುಂಬ ಸದಸ್ಯರು ನಗರದಲ್ಲಿ ಇರಲಿಲ್ಲ. ಅಪಾರ ಹಣ ಪತ್ತೆಯಾಗಿದೆ ಎಂಬ ವರದಿಗಳ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲೀಜಿಯಂ ಸುಪ್ರೀಂ ಕೋರ್ಟ್ ಶುಕ್ರವಾರ ಆಂತರಿಕ ತನಿಖೆ ಆರಂಭಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ನ್ಯಾಯಮೂರ್ತಿ ವರ್ಮಾ ಅವರನ್ನು ಅವರ ಮಾತೃ ನ್ಯಾಯಾಲಯ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲು ನಿರ್ಧರಿಸಿದೆ. ಈ ವಿಷಯದಲ್ಲಿ ವರ್ಗಾವಣೆ “ಅಂತಿಮ ಹಂತ” ಅಲ್ಲ ಎಂದು ಹೇಳಿದ ಕೊಲಿಜಿಯಂ ಆಂತರಿಕ ತನಿಖೆ ನಡೆಸಲು ನಿರ್ಧರಿಸಿದೆ.
ಅಧಿಕೃತ ಮಾರ್ಗಗಳ ಮೂಲಕ ಈ ವಿಷಯದ ಬಗ್ಗೆ ತಿಳಿಸಿದಾಗ, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ನ್ಯಾಯಮೂರ್ತಿ ವರ್ಮಾ ಅವರನ್ನು ವರ್ಗಾವಣೆ ಮಾಡಲು ನಿರ್ಧರಿಸಿತು.
ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರಿಂದ ವರದಿಯನ್ನು ಕೇಳಿದೆ ಎಂದು ಉನ್ನತ ಮೂಲಗಳು ತಿಳಿಸಿವೆ ಎಂದು ಬಾರ್ & ಬೆಂಚ್‌ ವರದಿ ಮಾಡಿದೆ.

ಪ್ರಮುಖ ಸುದ್ದಿ :-   ಹಾರಲು ಅನುಮತಿ ಕೇಳಬೇಡಿ'...: ಮೋದಿ ಲೇಖನದ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಟೀಕೆಗಳ ನಂತ್ರ ಶಶಿ ತರೂರ ಮಾರ್ಮಿಕ ಪೋಸ್ಟ್

ಶುಕ್ರವಾರ ಬೆಳಿಗ್ಗೆ ನಡೆದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ಪ್ರಸಕ್ತ ಪ್ರಕರಣದಲ್ಲಿ ಕೇವಲ ಶಿಕ್ಷಾರ್ಹ ವರ್ಗಾವಣೆ ಮಾತ್ರ ಸಾಲದು ಎನ್ನುವ ಅಭಿಪ್ರಾಯ ವ್ಯಕ್ತವಾಗಿತ್ತು. ನ್ಯಾಯಮೂರ್ತಿ ವರ್ಮಾ ವಿರುದ್ಧ ಕೆಲ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಅಭಿಪ್ರಾಯ ಮೂಡಿತ್ತು.
ಈ ಹಿನ್ನೆಲೆಯಲ್ಲಿ ಪೂರ್ಣ ಸುಪ್ರೀಂ ಕೋರ್ಟ್‌ ಆಂತರಿಕ ತನಿಖೆಗೆ ಸರ್ವಾನುಮತದಿಂದ ಒಪ್ಪಿಕೊಂಡಿತು. ಮೊದಲ ಹಂತವಾಗಿ ವರ್ಗಾವಣೆಯಾಗಲಿದ್ದು, ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿ ತಿಳಿಸಿದೆ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement