ಮೈಸೂರು | ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆ ಆರೋಪಿ ಕಾಲಿಗೆ ಗುಂಡು

ಮೈಸೂರು : ದರೋಡೆ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕೇರಳ ಮೂಲದ ಆರೋಪಿ ಆದರ್ಶ ಎಂಬಾತ ಗುಂಡೇಟಿನಿಂದ ಗಾಯಗೊಂಡ ದರೋಡೆಕೋರ. ಈತನನ್ನು ಮೇಟಗಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಸಬ್‌ಇನ್‌ಸ್ಪೆಕ್ಟರ್‌ ಪ್ರಕಾಶ ಹಾಗೂ ಸಿಬ್ಬಂದಿ ಹರೀಶ ಅವರು ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಜಯಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯ ಹಾರೋಹಳ್ಳಿ ಬಳಿ ಹಾಡಹಗಲೇ ಕೇರಳ ಮೂಲದ ಉದ್ಯಮಿಯನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿತ್ತು. ದರೋಡೆ ನಡೆದ ಸ್ಥಳದಲ್ಲಿ ಕ್ವಾಲಿಸ್‌‍ ಕಾರು ದೊರೆತಿತ್ತು. ನಂತರದ ತನಿಖೆಯಲ್ಲಿ ಈ ಕಾರು ಕೇರಳದ ಆದರ್ಶ ಎಂಬಾತನಿಗೆ ಸೇರಿದ್ದು ಎಂಬುದು ಎಂಬುದಾಗಿ ತಿಳಿದುಬಂದಿತ್ತು. ಕೊನೆಗೂ ಪೊಲೀಸರು ಈತನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದರು. ನಂತರ ಈತನ ಕಾರು ದೊರೆತ ಸ್ಥಳದಲ್ಲಿ ಮಹಜರು ಮಾಡಲು ಈತನನ್ನು ಇಂದು ಬೆಳಿಗೆ 7ರ ಸುಮಾರಿನಲ್ಲಿ ಜಯಪುರ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಪ್ರಕಾಶ, ಪಿರಿಯಾಪಟ್ಟಣ ಇನ್‌ಸ್ಪೆಕ್ಟರ್‌ ದೀಪಕ ಹಾಗೂ ಸಿಬ್ಬಂದಿ ಕರೆದೊಯ್ದಿದ್ದಾರೆ. ಈ ವೇಳೆ ಮೂತ್ರವಿಸರ್ಜನೆ ನೆಪವೊಡ್ಡಿ ನಂತರ ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಸಬ್‌ಇನ್‌ಸ್ಪೆಕ್ಟರ್‌ ಪ್ರಕಾಶ ಅವರು ಶರಣಾಗುವಂತೆ ಹಲವು ಬಾರಿ ಮನವಿ ಮಾಡಿದರೂ ಕಿವಿಗೊಡದಿದ್ದಾಗ ಇನ್‌ಸ್ಪೆಕ್ಟರ್‌ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಸಿದ್ದಾರೆ. ಎಚ್ಚರಿಕೆಯ ನಡುವೆಯೂ ಅತ ಹಲ್ಲೆಗೆ ಯತ್ನಿಸಿದಾಗ ಆತ್ಮರಕ್ಷಣೆಗೆ ಇನ್‌ಸ್ಪೆಕ್ಟರ್‌ ಹಾರಿಸಿದ ಗುಂಡು ದರೋಡೆಕೋರ ಆದರ್ಶ ಕಾಲಿಗೆ ತಗುಲಿದೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement