ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ.
ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಟ್ಯಾಂಡ್-ಅಪ್ ಕಾಮಿಡಿಯನ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಕಾಮ್ರಾ ಈ ಬಗ್ಗೆ ತಾನು ‘ಕ್ಷಮೆಯಾಚಿಸುವುದಿಲ್ಲ’ ಎಂದು ಹೇಳಿದ್ದಾರೆ. ಅವರ ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಏಕನಾಥ ಶಿಂಧೆ ಅವರನ್ನು ದೇಶದ್ರೋಹಿ ಎಂದು ಕರೆದ ನಂತರ ವಿವಾದ ಭುಗಿಲೆದ್ದಿದೆ.

ಕಾಮ್ರಾ ಇಂದು, ಮಂಗಳವಾರ ವಿಚಾರಣೆಗೆ ಹಾಜರಾಗದಿರಬಹುದು ಮತ್ತು ಅವರು ರಾಜ್ಯದಲ್ಲಿ ಇಲ್ಲದಿರುವುದರಿಂದ ಮತ್ತೊಂದು ದಿನಾಂಕಕ್ಕೆ ಸಮನ್ಸ್‌ ಕೋರಬಹುದು ಎಂದು ಮೂಲಗಳು ತಿಳಿಸಿವೆ. ಸೋಮವಾರ, ಖಾರ್ ಪೊಲೀಸರ ತಂಡವು ಹಾಸ್ಯನಟನ ಪೋಷಕರು ವಾಸಿಸುವ ನಿವಾಸಕ್ಕೆ ಭೇಟಿ ನೀಡಿತ್ತು.
ಶಿಂಧೆ ಅವರ ವಿರುದ್ಧದ ವಿವಾದಾತ್ಮಕ ಕಾಮೆಂಟ್‌ಗಳಿಗೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ. ಮತ್ತು ತಾವು ಹಾಸ್ಯ ಕಾರ್ಯಕ್ರಮವನ್ನು ರೆಕಾರ್ಡ್ ಮಾಡಿದ ಸ್ಥಳದಲ್ಲಿ ನಡೆದ ವಿಧ್ವಂಸಕತೆಯನ್ನು ಖಂಡಿಸಿದ್ದಾರೆ.
ಜನಪ್ರಿಯ ಹಿಂದಿ ಚಲನಚಿತ್ರದ ಹಾಡಿನ ಸಾಹಿತ್ಯವನ್ನು ಬದಲಾಯಿಸುವ ಮೂಲಕ ಕುನಾಲ್‌ ಕಾಮ್ರಾ ತನ್ನ ಪ್ರದರ್ಶನದಲ್ಲಿ ಶಿಂಧೆ ಅವರ ರಾಜಕೀಯ ವೃತ್ತಿಜೀವನದ ಬಗ್ಗೆ ಗೇಲಿ ಮಾಡಿದ್ದಕ್ಕಾಗಿ ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ ಎದ್ದಿದೆ.
ಖಾರ್ ಪ್ರದೇಶದ ಯುನಿಕಾಂಟಿನೆಂಟಲ್ ಹೋಟೆಲ್‌ನಲ್ಲಿನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಅವರ ಪ್ರದರ್ಶನದ ಸಮಯದಲ್ಲಿ, ಕಾಮ್ರಾ ಅವರು ಮಹಾರಾಷ್‌ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು “ದೇಶದ್ರೋಹಿ” ಎಂದು ಉಲ್ಲೇಖಿಸಿದ್ದರು ಮತ್ತು ಅವರನ್ನು ಗೇಲಿ ಮಾಡಿದ್ದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

2022 ರಲ್ಲಿ ಶಿಂಧೆ ಅವರ ಆಗಿನ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯದ ಬಗ್ಗೆ ಟೀಕೆ-ಟಿಪ್ಪಣಿ ಮಾಡಲು ಕಾಮ್ರಾ ಅವರು ‘ದಿಲ್ ತೋ ಪಾಗಲ್ ಹೈ’ ಚಿತ್ರದ ಹಿಂದಿ ಹಾಡಿನ ಮಾರ್ಪಡಿಸಿ ಗೇಲಿ ಮಾಡಿದ್ದರು.
ಕಾಮ್ರಾ ಅವರ ಹಾಸ್ಯದ ಅನೇಕ ವೀಡಿಯೊಗಳು ವೈರಲ್ ಆಗುತ್ತಿದ್ದಂತೆ, ಶಿವಸೇನೆಯ (ಏಕನಾಥ ಶಿಂಧೆ ಬಣ) ಕಾರ್ಯಕರ್ತರು ಕಾರ್ಯಕ್ರಮದ ಸ್ಥಳವಾದ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ ಗೆ ನುಗ್ಗಿ ಧ್ವಂಸಗೊಳಿಸಿದರು.
ನಂತರ, ಶಿವಸೇನೆ ಕಾರ್ಯಕರ್ತರು ನೀಡಿದ ದೂರಿನ ಮೇಲೆ ಕಾಮ್ರಾ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಯಿತು. ಇದೇವೇಳೆ ಮುಂಬೈ ಪೊಲೀಸರು ಸೋಮವಾರ ಮುಂಬೈ ಹೋಟೆಲ್ ಸ್ಥಳವನ್ನು ಧ್ವಂಸಗೊಳಿಸಿದ್ದಕ್ಕಾಗಿ ಶಿವಸೇನೆ ಕಾರ್ಯಾಧ್ಯಕ್ಷ ರಾಹುಲ್ ಕನಾಲ್ ಮತ್ತು ಇತರ 11 ಮಂದಿಯನ್ನು ಬಂಧಿಸಿದ್ದಾರೆ. ಕೆಲವು ಗಂಟೆಗಳ ನಂತರ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಎಲ್ಲರಿಗೂ ಜಾಮೀನು ನೀಡಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement