ವೀಡಿಯೊ..| ವಿಚ್ಛೇದನ ಪ್ರಕ್ರಿಯೆ ಮಧ್ಯೆ ಪೊಲೀಸ್‌ ಠಾಣೆಯಲ್ಲೇ ಪತಿ ಮೇಲೆ ಹಲ್ಲೆ ನಡೆಸಿದ ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ

ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ವಿಚ್ಛೇದನ ಪ್ರಕ್ರಿಯೆಯ ಮಧ್ಯೆ ಪೊಲೀಸ್‌ ಠಾಣೆಯಲ್ಲೇ  ಪತಿ – ಕಬಡ್ಡಿ ಆಟಗಾರ ದೀಪಕ ನಿವಾಸ ಹೂಡಾ ಅವರ ಮೇಲೆ ಹಲ್ಲೆ ನಡೆಸಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಘಟನೆ ಮಾರ್ಚ್ 15 ರಂದು ಹರಿಯಾಣದ ಹಿಸಾಸ್‌ ಪೊಲೀಸ್ ಠಾಣೆಯೊಳಗೆ ನಡೆದಿದೆ ಎಂದು ವರದಿಯಾಗಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ಸವೀತಿ ಬೂರಾ ಈ ಹಿಂದೆ ಪತಿ ದೀಪಕ ಹೂಡಾ ಅವರಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವೀಡಿಯೊದಲ್ಲಿ, ಬೂರಾ ಮಾತುಕತೆಯ ಸಮಯದಲ್ಲಿ ಕುಳಿತುಕೊಂಡಿದ್ದ ಹೂಡಾ ಕಡೆಗೆ ನುಗ್ಗಿ ಅವರ ಕುತ್ತಿಗೆಯನ್ನು ಹಿಡಿದುಕೊಂಡಿದ್ದಾರೆ. ಕೊರಳಪಟ್ಟಿ ಹಿಡಿದು ಎಳೆದಾಡಿದ್ದಾರೆ. ಕುಟುಂಬಸ್ಥರು ತಕ್ಷಣವೇ ಅವರನ್ನು ಮಧ್ಯಪ್ರವೇಶಿಸಿ ಅವರನ್ನು ಬೇರ್ಪಡಿಸಿದ್ದಾರೆ. ಆದರೆ ಪೊಲೀಸ್ ಠಾಣೆಯೊಳಗೆ ಅವರ ನಡುವೆ ತೀವ್ರ ವಾಗ್ವಾದ ಮುಂದುವರೆಯಿತು.

ಇಬ್ಬರೂ 2022 ರಲ್ಲಿ ವಿವಾಹವಾಗಿದ್ದರು. ಈ ಹಿಂದೆ, ಸವೀತಿ ಬೂರಾ ದೀಪಕ ಹೂಡಾ ಹಾಗೂಅವರ ಕುಟುಂಬದವರು ವರದಕ್ಷಿಣೆಗಾಗಿ ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ತನ್ನ ಏಷ್ಯಾಡ್‌ನಲ್ಲಿ ಕಂಚು ವಿಜೇತ ಕಬಡ್ಡಿ ಆಟಗಾರರಾಗಿದ್ದ ಪತಿ ದೀಪಕ ಹೂಡಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹೂಡಾ ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಮತ್ತು ತನ್ನ ಕುಟುಂಬದಿಂದ ಎಸ್‌ಯುವಿ ಮತ್ತು 1 ಕೋಟಿ ರೂ. ಹಣದ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ. ಇದೇವೇಳೆ ಹೂಡಾ ಹಿಸಾರ್ ಮೂಲದ ಬಾಕ್ಸರ್‌ ಸವೀತಿ ಬೋರಾ ಕುಟುಂಬವು ತನ್ನ ಆಸ್ತಿಯನ್ನು ಕಬಳಿಸಿದೆ ಮತ್ತು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಹರಿಯಾಣ ದಂಪತಿ ಹಿಸಾರ್ ಮತ್ತು ರೋಹ್ಟಕ್ ಪೊಲೀಸ್ ಠಾಣೆಗಳಲ್ಲಿ ಪರಸ್ಪರ ದೂರು ದಾಖಲಿಸಿಕೊಂಡಿದ್ದಾರೆ.

ಬೂರಾ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಹೂಡಾ ವಿರುದ್ಧ ಹರಿಯಾಣದ ಹಿಸಾರ್‌ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಪತಿ ದೀಪಕ ಹೂಡಾ ವಿರುದ್ಧ ಸವೀತಿ ಬೂರಾ ನೀಡಿದ ದೂರಿನ ಆಧಾರದ ಮೇಲೆ ಫೆಬ್ರವರಿ 25 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿಸಾರ್‌ನ ಮಹಿಳಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸೀಮಾ ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 85 ರ ಅಡಿಯಲ್ಲಿ ಮಹಿಳೆಯ ಪತಿ ದೀಪ ಹೂಡಾ ವಿರುದ್ಧ ಬೂರಾ ಅವರ ಮೇಲೆ ಕ್ರೌರ್ಯ ಮಾಡಿದ್ದಕ್ಕೆ ಪ್ರಕರಣವನ್ನು ದಾಖಲಿಸಲಾಗಿದೆ. ಹೂಡಾ ಅವರು 2024 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ರೋಹ್ಟಕ್ ಜಿಲ್ಲೆಯ ಮೆಹಮ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು.
ದೀಪ ಹೂಡಾ ಅವರು 2016 ರಲ್ಲಿ ದಕ್ಷಿಣ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಮತ್ತು 2014 ರ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತೀಯ ಕಬಡ್ಡಿ ತಂಡದ ಭಾಗವಾಗಿದ್ದರು. ಪ್ರೊ ಕಬಡ್ಡಿ ಲೀಗ್‌ನಲ್ಲೂ ಆಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಛತ್ತೀಸ್‌ಗಡದಲ್ಲಿ 3 ತಿಂಗಳ ಪಡಿತರ ಒಂದೇ ಬಾರಿಗೆ ವಿತರಣೆ ; ಗೇಟ್‌ ಮುರಿದು ಒಳ ನುಗ್ಗಿದ ಜನ ಸಮೂಹ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement