ಕೊಡಗು : ಪೊನ್ನಂಪೇಟೆ ಬಳಿ ಒಂದೇ ಕುಟುಂಬದ ‌ನಾಲ್ವರ ಭೀಕರ ಹತ್ಯೆ

ಮಡಿಕೇರಿ : ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರದಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಬೇಗೂರು ಗ್ರಾಮದ ಕರಿಯ(75), ಗೌರಿ (70) ದಂಪತಿ ಹಾಗೂ ನಾಗಿ (30) ಮತ್ತು ಮಗಳು ಕಾವೇರಿ(5) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇಂದು, ಗುರುವಾರ ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮನೆಯಲ್ಲಿ ಜಗಳ ನಡೆದ ನಂತರ ನಾಲ್ವರನ್ನು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಹತ್ಯೆಗೀಡಾದ ಕರಿಯ ಹಾಗೂ ಕುಟುಂಬದವರನ್ನು ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಕರೆಯಲು ಹೋದಾಗ ಹತ್ಯೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಗಿರೀಶ ಎಂಬಾತ ನಾಪತ್ತೆಯಾಗಿದ್ದು, ಹೀಗಾಗಿ ಈತ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಎಸ್‌ಪಿ ರಾಮರಾಜನ್ ಹಾಗೂ ಪೊನ್ನಂಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕರಿಯ, ಗೌರಿ ದಂಪತಿ ಹಾಗೂ ಮಗಳು ನಾಗಿ (30), ಪತಿ ಗಿರೀಶ (35) ಹಾಗೂ ಮಗಳು ಕಾವೇರಿ (5) ಒಂದೇ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ ಆರೋಪಿ ಸಿಕ್ಕಿದ ನಂತರ ಘಟನೆಗೆ ನಿಖರ ಕಾರಣ ತಿಳಿದುಬರಲಿದೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement