ಬೆಳಗಾವಿ | ಅಕ್ಕನ ಮಗಳ ಮದುವೆಗೆ ರಜೆ ಕೊಟ್ಟಿಲ್ಲವೆಂದು ನೊಂದು ಬಸ್ಸಿನಲ್ಲೇ ಚಾಲಕ ಆತ್ಯಹತ್ಯೆ

ಬೆಳಗಾವಿ: ತಮ್ಮ ಮನೆಯಲ್ಲಿ ನಡೆಯುತ್ತಿರುವ ಮದುವೆಯಲ್ಲಿ ಪಾಲ್ಗೊಳ್ಳಲು ಮೇಲಧಿಕಾರಿಗಳು ರಜೆ (Leave) ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ರಾಜ್ಯ ಸಾರಿಗೆ ಸಂಸ್ಥೆ ಚಾಲಕನೊಬ್ಬ driver) ಬಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಘಟನೆ ಬೆಳಗಾವಿ ಡಿಪೋದ 2ನೇ ಘಟಕದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಾಲಕನನ್ನು ನಗರದ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಎಂದು ಗುರುತಿಸಲಾಗಿದೆ. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು.
ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ ಕೊಡುವಂತೆ ಡಿಪೊ‌ ಮ್ಯಾನೇಜರ್ ಬಳಿ ಅರ್ಜಿ ಮೂರು ದಿನಗಳ ಹಿಂದೆ ರಜೆ ಸಲ್ಲಿಸಿದ್ದರಂತೆ. . ಆದರೆ ಎಷ್ಟೇ ಕೇಳಿದರೂ ಅವರು ರಜೆ ಕೊಡದ ಕಾರಣ ಮನನೊಂದು ಅವರು ಬುಧವಾರ ಬೆಳಿಗ್ಗೆ ಬಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಿಬಿಟಿಯಿಂದ ವಡಗಾವ ನಗರ ಸಂಚಾರ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಿದ್ದ ಅವರು ಡಿಪೊದಲ್ಲಿ ನಿಲ್ಲಿಸಿದ್ದ ಅದೇ ಬಸ್ಸಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement