ಬೆಂಗಳೂರು : ರಾಜ್ಯ ಸರ್ಕಾರ ಡೀಸೆಲ್ ಮೇಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಲಾರಿ ಮಾಲೀಕರು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಎಲ್ಲ ಬಗೆಯ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಬೇಡಿಕೆ ಈಡೇರಿಸುವವರೆಗೂ ಲಾರಿಗಳ ಸಂಚಾರ ಬಂದ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರ ಏಳು ತಿಂಗಳಲ್ಲಿ ಡೀಸೆಲ್ ಬೆಲೆಯನ್ನು ಲೀಟರಿಗೆ 5 ರೂ. ಹೆಚ್ಚಸಿದೆ. ಬೆಲೆ ಇಳಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಮುಂದಾಗಿದ್ದೇವೆ. ಏಪ್ರಿಲ್ 14 ರ ವರೆಗೆ ಸರ್ಕಾರಕ್ಕೆ ಕಾಲಾವಕಾಶ ನೀಡಲಾಗುತ್ತದೆ. ಏಪ್ರಿಲ್ 15ರ ರಾತ್ರಿಯಿಂದಲೇ ಮುಷ್ಕರ ಆರಂಭವಾಗಲಿದೆ. ಗೂಡ್ಸ್ ಟ್ರಾನ್ಸ್ ಪೋರ್ಟ್ ಸಂಪೂರ್ಣ ಬಂದ್ ಆಗಲಿದೆ. ಪೆಟ್ರೋಲಿಯಂ ಅಸೋಸಿಯೇಷನ್, ಚಾಲಕರ ಸಂಘಗಳ ಬೆಂಬಲ ಇದೆ. ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡುವುದಿಲ್ಲ. ಏರ್ ಪೋರ್ಟ್ ಟ್ಯಾಕ್ಸಿ, ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ 9 ಲಕ್ಷ ವಾಹನಗಳು ಸ್ಥಗಿತಗೊಳ್ಳಲಿದೆ. ಜೊತೆಗೆ ಅಕ್ಕಿ ಲೊಡ್, ಗೂಡ್ಸ್, ಪೆಟ್ರೋಲ್ ಡಿಸೇಲ್ ಲಾರಿಗಳನ್ನೂ ಬಂದ್ ಮಾಡಲಾಗುತ್ತದೆ. ಇದಕ್ಕೆ ಚಾಲಕರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಎಂದು ಷಣ್ಮುಗಪ್ಪ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ