ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ.
ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ.
ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ ಸಚಿವ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದ ಹಿನ್ನಲೆಯಲ್ಲಿ ಲಾರಿ ಮುಷ್ಕರ ಹಿಂಪಡೆಯುವುದಾಗಿ ಪದಾಧಿಕಾರಿಗಳು ಘೋಷಿಸಿದರು. ಗುರುವಾರ ವಿಧಾನಸೌಧದಲ್ಲಿನ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ನಡೆಸಿದ ಸಭೆ ಯಶಸ್ವಿಯಾಗಿದೆ. ಈ ಹಿಂದಿನ ಎರಡು ಸಭೆಗಳು ಒಮ್ಮತಕ್ಕೆ ಬರಲು ವಿಫಲವಾಗಿತ್ತು.

ಮುಷ್ಕರ ಹಿಂಪಡೆದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಲಾರಿಗಳ ಓಡಾಟ ಆರಂಭವಾಗಿದೆ. ʼʼನಮ್ಮ ಎಲ್ಲ ಬೇಡಿಕೆ ಈಡೇರಿಸುವುದಾಗಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಹೀಗಾಗಿ ಈ ಕ್ಷಣದಿಂದಲೇ ಲಾರಿ ಮುಷ್ಕರ ವಾಪಸ್ ಪಡೆಯಲಾಗುವುದುʼʼ ಸಭೆಯ ಬಳಿಕ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್‌. ಷಣ್ಮುಗಪ್ಪ ಪ್ರಕಟಿಸಿದ್ದಾರೆ.
ತಕ್ಷಣ ಡೀಸೆಲ್ ದರ ಇಳಿಸಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು, ಟೋಲ್‌ಗಳಲ್ಲಿ ಪೊಲೀಸರು ಲಾರಿ ಚಾಲಕರಿಗೆ ನೀಡುವ ಕಿರುಕುಳ ತಪ್ಪಿಸಬೇಕು, ವಾಹನ ವಿಮೆಯ ದರ ಕಡಿತಗೊಳಿಸುವುದು, ಎಫ್‌ಸಿ ದರ ಕಡಿಮೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸಲಾಗಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement