ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.
ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.
ಶನಿವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆ ಬ್ರಹ್ಮರಥೋತ್ಸವದ ತೇರಿನ ಮೇಲ್ಭಾಗ ಏಕಾಏಕಿ ಕುಸಿದು ಬಿದ್ದಿದೆ.

ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಕೆಳಗಡೆ ಸಾವಿರಾರು ಭಕ್ತರು ರಥ ಎಳೆಯುವುದರಲ್ಲಿ ತಲ್ಲೀನರಾಗಿದ್ದರು. ರಥ ಮುಂದಕ್ಕೆ ಸಾಗುತ್ತಿದ್ದಂತೆ ಏಕಾ ಏಕಿ ರಥವನ್ನು ನಿಗ್ರಹಿಸುವ ದಂಡ ತುಂಡಾದ ಪರಿಣಾಮ ರಥದ ಮೇಲ್ಭಾಗ ಸಂಪೂರ್ಣವಾಗಿ ಕೆಳಗೆಉರುಳಿದೆ. ಅರ್ಚಕರು ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಳದ ರಥೋತ್ಸವ ಅದ್ಧೂರಿಯಾಗಿ ಸಾಗಿತ್ತು. ಸಾವಿರಾರು ಜನರು ಪಾಲ್ಗೊಂಡಿದ್ದ ವೇಳೆ ರಥ ಬೀದಿಗಳಲ್ಲಿ ಸಾಗುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ತೇರಿನ ಮೇಲ್ಬಾಗ ಕುಸಿದ ವೇಳೆ ಅರ್ಚಕರು ತೇರಿನಲ್ಲೇ ಇದ್ದರು, ಅದೃಷ್ಟವಶಾತ್ ಅವರಿಗೆ ಯಾವುದೇ ಅಪಾಯ ಉಂಟಾಗದೆ ಪಾರಾಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಶುಕ್ರವಾರ ರಾತ್ರಿ ತಂತ್ರಿಗಳು ವಿಶೇಷ ಪೂಜೆ, ಪ್ರಾರ್ಥನೆ ಮಾಡಿದ ನಂತರ ರಥೋತ್ಸವ ಆರಂಭವಾಯಿತು. ವಿವಿಧ ವಾದ್ಯಗೋಷ್ಠಿ, ಓಕುಳಿ, ಉರುಳು ಸೇವೆಯ ಸುತ್ತಿನ ಬಳಿಕ ದೇವರು ಮೂಷಿಕ ರೂಪದಲ್ಲಿ ಪುಷ್ಪಾಲಂಕೃತ ಚಿನ್ನದ ಪಲ್ಲಕ್ಕಿಯಲ್ಲಿ ಕುಳಿತು ಪೇಟೆ ಸವಾರಿಯಾಗಿ ತಡರಾತ್ರಿ 1:40ರಿಂದ 2 ಗಂಟೆಯ ಸುಮಾರಿಗೆ ರಥೋತ್ಸವ ಗದ್ದೆಗೆ ಆಗಮನವಾಯಿತು. ರಥೋತ್ಸವ ನೋಡಲು ಜನ ಸಾಗರವೇ ಹರಿದು ಬಂದಿತ್ತು. ಈ ಸಂದರ್ಭದಲ್ಲಿ ರಥದ ಮೇಲ್ಭಾಗ ಉರುಳು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯವಾಗಿಲ್ಲ.
ತೇರು ಬಿದ್ದ ನಂತರ ದೇವರ ಉತ್ಸವ ಮತ್ತೆ ಮುಂದುವರಿಸಲು ತೀರ್ಮಾನ ಮಾಡಲಾಯಿತು. ಚಂದ್ರಮಂಡಲ ತೇರಿನಲ್ಲಿ ಉತ್ಸವ ಮುಂದುವರೆದಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement