ವೀಸಾ ರದ್ದುಗೊಳಿಸಿದ ನಂತರ ಪಾಕಿಸ್ತಾನಿಗಳನ್ನು ಭಾರತದಿಂದ ಹೊರಹಾಕಲು ಎಲ್ಲ ರಾಜ್ಯಗಳಿಗೆ ಅಮಿತ್ ಶಾ ನಿರ್ದೇಶನ

ನವದೆಹಲಿ: ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ನೀಡಿರುವ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಪಾಕಿಸ್ತಾನದ ನಾಗರಿಕರನ್ನು ಗುರುತಿಸಿ ಆಯಾ ರಾಜ್ಯಗಳಿಂದ ತಕ್ಷಣವೇ ಹೊರಹೋಗುವಂತೆ ಸೂಚನೆ ನೀಡಬೇಕು ಎಂದು ಶುಕ್ರವಾರ ಎಲ್ಲಾ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ, ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಅವರನ್ನು ಗಡೀಪಾರು ಮಾಡಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಎಲ್ಲಾ ಪಾಕಿಸ್ತಾನಿ ನಾಗರಿಕರು ಏಪ್ರಿಲ್ 27 ರೊಳಗೆ ಭಾರತವನ್ನು ತೊರೆಯುವಂತೆ ಭಾರತ ಸೂಚಿಸಿದೆ. ವೈದ್ಯಕೀಯ ವೀಸಾ ಹೊಂದಿರುವ ಪಾಕಿಸ್ತಾನಿ ನಾಗರಿಕರಿಗೆ ಏಪ್ರಿಲ್ 29ರ ವರೆಗೆ ಅವಕಾಶ ನೀಡಲಾಗಿದೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭದ್ರತೆಗಾಗಿ ಸಂಪುಟ ಸಮಿತಿ ತೆಗೆದುಕೊಂಡ ನಿರ್ಧಾರಗಳ ಮುಂದುವರಿಕೆಯಭಾಗವಾಗಿ, ಭಾರತ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ” ಎಂದು ವಿದೇಶಾಂಗ ಸಚಿವಾಲಯವು ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ. ಅಲ್ಲದೆ, ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ”.
ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಮಂಗಳವಾರ ಪ್ರವಾಸಿಗರ ಮೇಲೆ ಗುಂಡು ಹಾರಿಸಿ 26 ಜನರನ್ನು ಕೊಂದ ನಂತರ ಪಾಕಿಸ್ತಾನದ ವಿರುದ್ಧ ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದರಿಂದ ಹಿಡಿದು ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ಅನ್ನು ಮುಚ್ಚುವವರೆಗೆ ಬಹುಮುಖಿ ಕ್ರಮದ ನಂತರ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ರದ್ದುಗೊಳಿಸುವ ಇತ್ತೀಚಿನ ಕ್ರಮವು ಬಂದಿದೆ.

ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement