ಎನ್‌ಸಿಸಿ ಶಿಬಿರದಲ್ಲಿ ನಮಾಜ್‌ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ : 7 ಶಿಕ್ಷಕರು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲು

ಬಿಲಾಸ್ಪುರ: ಛತ್ತೀಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದ ಎನ್.ಸಿ.ಸಿ ಶಿಬಿರದಲ್ಲಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯ ಕೆಲವು ವಿದ್ಯಾರ್ಥಿಗಳಿಗೆ ಬಲವಂತವಾಘಿ ನಮಾಜ್ ಮಾಡಿಸಿದ ಆರೋಪದ ಮೇಲೆ ಶನಿವಾರ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ ಏಪ್ರಿಲ್ 1 ರವರೆಗೆ ನಡೆದ ಶಿಬಿರದಲ್ಲಿ ಅವರು 159 ವಿದ್ಯಾರ್ಥಿಗಳನ್ನು ನಮಾಜ್ ಮಾಡಲು ಬಲವಂತ ಮಾಡಲಾಯಿತು. ಆದರೆ ಅವರಲ್ಲಿ ಕೇವಲ ನಾಲ್ವರು ಮುಸ್ಲಿಮರು ಮಾತ್ರ ಇದ್ದರು ಎಂದು ಅವರು ಹೇಳಿದರು. ವಿದ್ಯಾರ್ಥಿಗಳು ಕ್ಯಾಂಪ್‌ನಿಂದ ಹಿಂತಿರುಗಿದ ಬಳಿಕ ಪ್ರತಿಭಟಿಸಿದ ನಂತರ ತನಿಖೆ ಆರಂಭಿಸಲಾಯಿತು, ನಂತರ ಹಲವು ಸಂಘಟನೆಗಳು ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿವೆ ಎಂದು ಅಧಿಕಾರಿ ಹೇಳಿದರು.

“ಈ ಘಟನೆ ಮಾರ್ಚ್ 31 ರಂದು ನಡೆದಿದೆ. ಬಿಲಾಸ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಜನೇಶ್ ಸಿಂಗ್ ಅವರು ಈ ವಿಷಯದ ಬಗ್ಗೆ ತನಿಖೆ ನಡೆಸಲು ನಗರ ಪೊಲೀಸ್ ವರಿಷ್ಠಾಧಿಕಾರಿ (ಕೊಟ್ವಾಲಿ) ಅಕ್ಷಯ್ ಸಬದ್ರಾ ನೇತೃತ್ವದಲ್ಲಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ತನಿಖಾ ವರದಿಯನ್ನು ಎಸ್ಎಸ್ಪಿಗೆ ಸಲ್ಲಿಸಿದ ನಂತರ ಶನಿವಾರ ಪ್ರಕರಣ ದಾಖಲಿಸಲಾಗಿದೆ” ಎಂದು ಅವರು ಹೇಳಿದರು.
ಗುರು ಘಾಸಿದಾಸ್ ಕೇಂದ್ರೀಯ ವಿಶ್ವವಿದ್ಯಾಲಯದ ಶಿಕ್ಷಕರಾದ ದಿಲೀಪ ಝಾ, ಮಧುಲಿಕಾ ಸಿಂಗ್, ಜ್ಯೋತಿ ವರ್ಮಾ, ನೀರಜಕುಮಾರಿ, ಪ್ರಶಾಂತ ವೈಷ್ಣವ, ಸೂರ್ಯಭಾನ್ ಸಿಂಗ್ ಮತ್ತು ಬಸಂತಕುಮಾರ ಮತ್ತು ತಂಡದ ನಾಯಕ-ವಿದ್ಯಾರ್ಥಿ ಆಯುಷ್ಮಾನ್ ಚೌಧರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 196 (ಬಿ), 197 (1) (ಬಿ) (ಸಿ), ಬಿಎನ್‌ಎಸ್‌ನ 299, 302, 190 ಮತ್ತು ಛತ್ತೀಸ್‌ಗಢ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೋಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣದ ಡೈರಿಯನ್ನು ಕೋಟಾ ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement