ಬಸ್‌ನಲ್ಲಿ ನಮಾಜ್‌ ಮಾಡಿದ ಚಾಲಕ ಅಮಾನತು ; ಕಾರ್ಮಿಕ ದಿನಾಚರಣೆಯಂದೇ ಸಸ್ಪೆಂಡ್‌

ಹುಬ್ಬಳ್ಳಿ : ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. (ಮೇ 1), ಕಾರ್ಮಿಕರ ದಿನಾಚರಣೆಯಂದೇ ಚಾಲಕ ಅಮಾನತುಗೊಂಡಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಹಾನಗಲ್ (Hangal) ಘಟಕದ ಚಾಲಕ ಎ.ಆರ್.ಮುಲ್ಲಾ ಬಸ್‌ ಚಲಾಯಿಸುತ್ತಿದ್ದ ವೇಳೆ ರಸ್ತೆ ಪಕ್ಕ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿತ್ತು.

ಈ ಬೆನ್ನಲ್ಲೆ ಸಾರಿಗೆ ಸಚಿವರು ಚಾಲಕನ ಮೇಲೆ ತನಿಖೆಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತುಗೊಳಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಶುಕ್ರವಾರ (ಮೇ 1) ಆದೇಶ ಹೊರಡಿಸಿದ್ದಾರೆ. ತನಿಖೆ ವಿಚಾರಣೆ ಪೂರ್ಣಗೊಳ್ಳುವವರೆಗೂ ಅಮಾನತು ಮಾಡಲಾಗಿದೆ.

ಘಟನೆ ಹಿನ್ನೆಲೆ:
ಹಾವೇರಿ ಡಿಪೋದ ಬಸ್‌ ಹಾವೇರಿಯಿಂದ ವಿಶಾಲಗಡಕ್ಕೆ ತೆರಳುವ ಬಸ್ಸಿನ ಚಾಲಕ ಕಂ ಕಂಡಕ್ಟರ್ ಹಾವೇರಿ – ಹುಬ್ಬಳ್ಳಿ ಮಾರ್ಗದ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ವೀಡಿಯೊ ವೈರಲ್‌ ಆಗಿತ್ತು. ಮಂಗಳವಾರ ಸಂಜೆ ನಡೆದ ಈ ಘಟನೆಯನ್ನು ಬಸ್ಸಿನಲ್ಲಿದ್ದ ಪ್ರಯಾಣಿಕರು ವೀಡಿಯೊ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕರ್ತವ್ಯದಲ್ಲಿರುವ ಸಂದರ್ಭದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದು ಹಲವು ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ನಂತರ ಸಾರಿಗೆ ಸಚಿವರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement