ಭಾರತ-ಪಾಕ್‌ ಮಧ್ಯೆ ಉದ್ವಿಗ್ನತೆ ; ಮೇ 7ರಂದು ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನಕ್ಕೆ ರಾಜ್ಯಗಳಿಗೆ ಕೇಂದ್ರದ ಸೂಚನೆ..! 1971ರಲ್ಲೂ ನಡೆದಿತ್ತು…!

ನವದೆಹಲಿ: ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉಂಟಾಗಿದ್ದು, “ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಪರಿಣಾಮಕಾರಿ ನಾಗರಿಕ ರಕ್ಷಣೆ”ಗಾಗಿ ಮೇ 7 ರಂದು ರಾಜ್ಯಗಳಿಗೆ ಭದ್ರತಾ ಅಣಕು ಕಸರತ್ತುಗಳನ್ನು ನಡೆಸುವಂತೆ ಕೇಂದ್ರ ಸರ್ಕಾರವು ಸೂಚಿಸಿದೆ. ಕೇಂದ್ರದ ಆದೇಶದ ಸಮಯವು ನಿರ್ಣಾಯಕವಾಗಿದೆ. ಕೊನೆಯ ಬಾರಿಗೆ ಇಂತಹ ಸಮರಾಭ್ಯಾಸವನ್ನು … Continued

ಕನ್ನಡಿಗರ ಕ್ಷಮೆ ಕೋರಿದ ಗಾಯಕ ಸೋನು ನಿಗಮ್‌

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಸೋನು ನಿಗಮ್ ನೀಡಿದ್ದ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾದ ನಂತರ ಅವರು ಕ್ಷಮೆಯಾಚಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ಪಷ್ಟೀಕರಣ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ, ಗಾಯಕ ನಂತರ ಕ್ಷಮೆಯಾಚಿಸಿದ್ದಾರೆ. ಕರ್ನಾಟಕದ ಮೇಲಿನ ಪ್ರೀತಿ ತನ್ನ ಅಹಂಗಿಂತ ದೊಡ್ಡದು ಎಂದು ಸೋನು ನಿಗಮ್‌ ಹೇಳಿದ್ದಾರೆ. “ಕ್ಷಮಿಸಿ ಕರ್ನಾಟಕ. ನಿಮ್ಮ … Continued

“ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಂದ ಭಾರತದ ಹಿತಾಸಕ್ತಿಗೆ ವಿರುದ್ಧ ಕೆಲಸ “: ಕೇಂದ್ರಕ್ಕೆ ತಿಳಿಸಿದ ಸದನ ಸಮಿತಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ “ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಲಾದ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು ವೇದಿಕೆಗಳ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತು ಕೇಂದ್ರದಿಂದ ವಿವರಗಳನ್ನು ಸಂಸತ್ತಿನ ಸಮಿತಿ ಕೇಳಿದೆ. “ದೇಶದಲ್ಲಿನ ಕೆಲವು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಮತ್ತು … Continued

ಬೈಲಹೊಂಗಲ | ಭೀಕರ ರಸ್ತೆ ಅಪಘಾತ; ಮಗು ಸೇರಿ ಸ್ಥಳದಲ್ಲೇ ಮೂವರು ಸಾವು

ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟವರು … Continued

1 ಕೋಟಿ ರೂ. ಹಣ ಕೊಡು, ಇಲ್ಲದಿದ್ದರೆ….; ಕ್ರಿಕೆಟರ್‌ ಮೊಹಮ್ಮದ್ ಶಮಿಗೆ ಕೊಲೆ ಬೆದರಿಕೆ

ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಶಮಿ ಅವರಿಗೆ ಭಾನುವಾರ ಇ ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆದೇಶದ ಮೇರೆಗೆ ಸೋಮವಾರ ಎಫ್‌ಐಆರ್ ದಾಖಲಾಗಿದ್ದು, ಶಮಿ ಪರವಾಗಿ ಅವರ ಸಹೋದರ ಹಸೀಬ್ ಈ ದೂರು ದಾಖಲಿಸಿದ್ದಾರೆ ಮತ್ತು … Continued

ಪಹಲ್ಗಾಮ್ ದಾಳಿ | ಪ್ರಧಾನಿ ಮೋದಿಗೆ ಫೋನ್‌ ಮಾಡಿದ ರಷ್ಯಾ ಅಧ್ಯಕ್ಷ ಪುತಿನ್ ; ಭಾರತಕ್ಕೆ ʼಸಂಪೂರ್ಣ ಬೆಂಬಲʼ ; ಪಾಕಿಸ್ತಾನಕ್ಕೆ ಕೊಟ್ರು ಶಾಕ್‌…

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು, ಅಮಾಯಕರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಗುಡುಗು-ಮಿಂಚು ಸಹಿತ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 10ರ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಾಯುಭಾರ ಕುಸಿತದಿಂದ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಹೀಗಾಗಿ ಮೇ 10ರ ವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲುದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೇ 7ರಿಂದ … Continued

ಪಹಲ್ಗಾಮ್ ಹತ್ಯಾಕಾಂಡದ ನಂತರ ಭಯೋತ್ಪಾದಕರ ಅಡಗುತಾಣ ಪತ್ತೆ, 5 ಸ್ಫೋಟಕ ಸಾಧನಗಳು ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಭದ್ರತಾ ಪಡೆಗಳು ಭೇದಿಸಿದ್ದು, ಭಯೋತ್ಪಾದಕರ ಸಂಚನ್ನು ವಿಫಲಗೊಳಿಸಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ 26 ನಾಗರಿಕರು ಸಾವಿಗೀಡಾದ ನಂತರ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಪೂಂಚ್‌ನ ಸುರನ್‌ಕೋಟ್‌ನಲ್ಲಿ ಭಾನುವಾರ ಸಂಜೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ … Continued

ವೀಡಿಯೊ..| ಭಯೋತ್ಪಾದಕರಿಗೆ ಆಹಾರ-ಆಶ್ರಯ ನೀಡಿದ್ದ ಆರೋಪಿ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿದ ನಂತರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 23 ವರ್ಷದ ಇಮ್ತಿಯಾಜ್ ಅಹ್ಮದ್ ಮಗ್ರೆ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್‌ಇಟಿಗಾಗಿ ಕೆಲಸ ಮಾಡುತ್ತಿದ್ದ ಆತನನ್ನು ಬಂಧಿಸಿದ ನಂತರ, … Continued

ಗಣಿಗಾರಿಕೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳದೇ ಇರಲು 20 ಲಕ್ಷ ರೂ. ಲಂಚ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಾಸಕ…!

ಜೈಪುರ: ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಪ್ರಶ್ನೆಗಳನ್ನು ಕೇಳುವುದನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ಭಾನುವಾರ ಬಂಧಿಸಿದೆ ಎಂದು ಹಿರಿಯ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಎಸಿಬಿ (ACB) ಇತಿಹಾಸದಲ್ಲಿ ಶಾಸಕರೊಬ್ಬರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ … Continued