ಬೆಳಗಾವಿ : ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಎರಡು ಕಾರುಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಹಿರೇಬಾಗೇವಾಡಿ ಗ್ರಾಮದ ಅನಿಸ್ ಸೈಯ್ಯದ್ (26), ಉಮೇಹೈಮಾನ ಸೈಯ್ಯದ್ (22), ಒಂದು ವರ್ಷದ ಮಗು ಅಹ್ಮದ್ ಸೈಯ್ಯದ್ ಸ್ಥಳದಲ್ಲಿಯೇ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಆಯಿಷಾ ಸೈಯ್ಯದ (18) ಹಾಗೂ ಇನ್ನೊಂದು ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ.ಪಾಟೀಲ ಅವರ ಪುತ್ರ ಸುರೇಶಗೌಡ ಪಾಟೀಲ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಸೈಯ್ಯದ್ ಕುಟುಂಬ ಗೋಕಾಕದಲ್ಲಿ ಸಂಬಂಧಿಕರ ಮದುವೆ ಮುಗಿಸಿಕೊಂಡು ಅಲ್ಟೋ ಕಾರಿನಲ್ಲಿ ಬರುವಾಗ ಚಿಕ್ಕಬಾಗೇವಾಡಿ ಗ್ರಾಮದ ಹತ್ತಿರ ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕಿಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆಯಿಂದ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬೈಲಹೊಂಗಲ ಪೊಲೀಸ್ ಠಾಣೆಯ ಸಿಪಿಐ ಪಂಚಾಕ್ಷರಿ ಸಾಲಿಮಠ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮ ಕಾಮೆಂಟ್ ಬರೆಯಿರಿ