ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ.
“ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ ಮೋದಿಯ ಹೆಸರನ್ನು ಸಹ ಉಚ್ಚರಿಸಲಾಗದ ಹೇಡಿಯಾದರೆ, ಗಡಿಯಲ್ಲಿ ಹೋರಾಡುವ ಸೈನಿಕನಿಗೆ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ?” ಎಂದು ಸಂಸದರು ಪಾಕಿಸ್ತಾನ ಸಂಸತ್ತಿನಲ್ಲಿ ಪ್ರಶ್ನಿಸಿದರು.
ಪಾಕಿಸ್ತಾನವು ಗುರುವಾರ ಸಂಜೆ ಭಾರತದ ಸೇನಾ ನೆಲೆ ಹಾಗೂ ನಾಗರಿಕ ಪ್ರದೇಶವನ್ನು ಗುರಿಯಾಸಿ ಕ್ಷಿಪಣಿ ದಾಳಿ ನಡೆಸಿದ್ದನ್ನು ಭಾರತ ಯಶಸ್ವಿಯಾಗಿ ತಟಸ್ಥಗೊಳಿಸಿದೆ ಅಥವಾ ನಾಶ ಮಾಡಿದೆ. ನಂತರ ಪ್ರತಿದಾಳಿಯಾಗಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಸೇರಿದಂತೆ ಪಾಕಿಸ್ತಾನದ 16 ನಗರಗಳ ಮೇಲೆ ವಾಯು ದಾಳಿ ನಡೆಸಿದ್ದು, ಭಾರತದ ದಾಳಿಗೆ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಈಗ ಪಾಕಿಸ್ತಾನದ ಸಂಸದರು ಪ್ರಧಾನಿ ವಿರುದ್ಧ ಸಿಡಿದೆದ್ದಿದ್ದಾರೆ. ನಮ್ಮ ನಾಯಕ ಪಕ್ಕದ ದೇಶದ ನಾಯಕನ ಹೆಸರು ಹೇಳಲು ಭಯ ಪಡುತ್ತಾರೆ. ರಾಜ ಸಿಂಹನಂತಿದ್ದರೆ ಆತನ ಸೇನೆಯಲ್ಲಿ ತೋಳಗಳಿದ್ದರೂ ಅವು ಸಿಂಹಗಳಂತೆ ಹೋರಾಡುತ್ತವೆ ಎಂದು ಟಿಪ್ಪು ಸುಲ್ತಾನ್ ಅವರ ಮಾತನ್ನು ಸಂಸದ ಸಂಸತ್ತಿನಲ್ಲಿ ಉಲ್ಲೇಖಿಸಿದ್ದಾರೆ.
ಪಾಕಿಸ್ತಾನದ ಮೇಲೆ ನಡೆದ ದಾಳಿ ಬಳಿಕ ಗುರುವಾರ ಮತ್ತೊಬ್ಬ ತಾಹೀರ್ ಇಕ್ಬಾಲ್ ಪಾಕಿಸ್ತಾನದ ಪ್ರಜೆಗಳನ್ನು ಕಾಪಾಡುವಂತೆ ಕೋರಿ ಸಂಸತ್ತಿನಲ್ಲಿಯೇ ಕಣ್ಣೀರು ಹಾಕಿದ್ದ ವೀಡಿಯೊ ವೈರಲ್ ಆಗಿತ್ತು. ಈಗ ಪಾಕಿಸ್ತಾನದ ಸಂಸದರೊಬ್ಬರು ತಮ್ಮ ಪ್ರಧಾನಿ ಶೆಹಬಾಜ್ ಶರೀಫ್ ಭಾರತದ ಪ್ರಧಾನಿ ಮೋದಿ ಹೆಸರು ಹೇಳಲು ಹೆಸದರುವ ಹೇಡಿ ಎಂದು ಜರೆದಿರುವ ವೀಡಿಯೊ ವೈರಲ್ ಆಗಿದೆ.
ಗುರುವಾರ ಸಂಜೆ, ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದ ಕೆಲವು ಭಾಗಗಳಿಗೆ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಉಡಾಯಿಸಿ ದಾಳಿ ನಡೆಸಿತ್ತು. ಆದರೆ ಭಾರತದ ವಾಯು ರಕ್ಷಣಾ ವ್ಯವಸ್ಥೆ S-400 ಮತ್ತು ಆಕಾಶ- ಜಮ್ಮು ನಾಗರಿಕ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ಒಂದು ಡ್ರೋನ್ ಹೊರತುಪಡಿಸಿ, ಪಾಕಿಸ್ತಾನ ಹಾರಿಸಿದ ಡ್ರೋನ್ಗಳು ಹಾಗೂ ಕ್ಷಿಪಣಿಗಳು ಗುರಿಗಳನ್ನು ತಲುಪುವ ಮೊದಲು ಮಧ್ಯ ಆಕಾಶದಲ್ಲಿ ಹೊಡೆದುರುಳಿಸಿವೆ.
ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಇಸ್ಲಾಮಾಬಾದ್, ಲಾಹೋರ್ ಮತ್ತು ಸಿಯಾಲ್ಕೋಟ್ ಸೇರಿದಂತೆ ಪಾಕಿಸ್ತಾನದ ಹಲವು ನಗರಗಳ ಮೇಲೆ ಡ್ರೋನ್ಗಳ ಮೂಲಕ ಪ್ರತಿದಾಳಿ ನಡೆಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ