ಧಾರವಾಡ: ಇಲ್ಲಿನ ಪ್ರತಿಷ್ಠಿತ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈವಾರ್ಷಿಕ ಚುನಾವಣೆಯಲ್ಲಿ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಬಣ ಭರ್ಜರಿ ಗೆಲುವು ಸಾಧಿಸಿದೆ.
ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ 135 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಒಂದೇ ಬಣದ ಎಲ್ಲ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ.
ಡಾ. ಸಂಜೀವ ಕುಲಕರ್ಣಿ (ಉಪಾಧ್ಯಕ್ಷ), ಬಸವಪ್ರಭು ಹೊಸಕೇರಿ (ಕಾರ್ಯಾಧ್ಯಕ್ಷ), ಶಂಕರ ಹಲಗತ್ತಿ (ಪ್ರಧಾನ ಕಾರ್ಯದರ್ಶಿ), ಸತೀಶ ತುರಮರಿ ( ಕೋಶಾಧ್ಯಕ್ಷ), ಶಂಕರ ಕುಂಬಿ ( ಸಹ ಕಾರ್ಯದರ್ಶಿ), ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶೈಲಜಾ ಅಮರಶೆಟ್ಟಿ, ಶಿವಾನಂದ ಬಾವಿಕಟ್ಟಿ, ಡಾ. ಜಿನದತ್ತ ಹಡಗಲಿ, ಗುರು ಹಿರೇಮಠ, ಡಾ. ಮಹೇಶ ಹೊರಕೇರಿ, ವೀರಣ್ಣ ವಡ್ಡೀನ, ಶಶಿಧರ ತೋಡಕರ, ವಿಶ್ವೇಶ್ವರಿ ಹಿರೇಮಠ (ಮಹಿಳಾ ಮೀಸಲು ಸದಸ್ಯೆ), ಪ್ರೊ.ಧನವಂತ ಹಾಜವಗೋಳ (ಎಸ್.ಟಿ. ಮೀಸಲು ಸದಸ್ಯ). ಆಯ್ಕೆಯಾಗಿದ್ದಾರೆ. ಒಟ್ಟು ೧೫ ಸ್ಥಾನಗಳಿಗೆ ಚುನಾವಣೆ ನಡೆಯಿತು. ಪಾಪು ಅಭಿಮಾನಿ ಬಳಗದ ಪರವಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರೆ, ಹಿರಿಯ ನ್ಯಾಯವಾದಿ ಪ್ರಕಾಶ ಉಡಿಕೇರಿ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ