ಬಿಜೆಪಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ, ಎಸ್‌.ಟಿ. ಸೋಮಶೇಖರ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ ಹೆಬ್ಬಾರ (Shivaram Hebbar) ಹಾಗೂ ಎಸ್.ಟಿ. ಸೋಮಶೇಖರ (ST Somashekhar) ಅವರನ್ನು ಬಿಜೆಪಿ (BJP)ಯಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವನಗೌಡ ಪಾಟೀಲ ಯತ್ನಾಳ್‌ ಅವರ ಉಚ್ಚಾಟನೆ ಮಾಡಿದ ಕೆಲವು ದಿನಗಳ ನಂತರ ಈ ಇಬ್ಬರು ಶಾಸಕರ ಉಚ್ಚಾಟನೆ ಬಂದಿದೆ.
ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement