ಬೆಂಗಳೂರು| ಆರ್‌ ಸಿಬಿ ಸಂಭ್ರಮಾಚರಣೆ ; ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಹಲವರ ಸಾವು ; ಅನೇಕರು ಅಸ್ವಸ್ಥ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ  ಅದ್ಧೂರಿ ಆಚರಣೆಗೆ ಆಗಮಿಸಬೇಕಿದ್ದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕಾಲ್ತುಳಿತದಲ್ಲಿ 10 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕುಸಿದು ಬಿದ್ದವರನ್ನು ಭದ್ರತಾ ಸಿಬ್ಬಂದಿ ಹೊರಗೆ ಕರೆದೊಯ್ಯುತ್ತಿರುವ ನಾಟಕೀಯ ದೃಶ್ಯಗಳು ಕಂಡುಬಂದವು. ಅವರನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮೂವರಲ್ಲಿ ಇಬ್ಬರು ಮಹಿಳೆ ಹಾಗೂ ಇಬ್ಬರು ಯುವಕರು ಎಂದು ಹೇಳಲಾಗಿದೆ.
ಉಸಿರಾಡಲು ಸಾಧ್ಯವಾಗದೆ ಕುಸಿದು ಬಿದ್ದ ಕೆಲವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೊರಗೆ ರಸ್ತೆಗಳಲ್ಲಿ ಅಭಿಮಾನಿಗಳು ಗುಂಪುಗೂಡಿದ್ದರಿಂದ ಆಂಬ್ಯುಲೆನ್ಸ್‌ಗಳು ಕ್ರೀಡಾಂಗಣವನ್ನು ಪ್ರವೇಶಿಸಲು ಕಷ್ಟವಾಯಿತು. ಕನಿಷ್ಠ 15 ಅಭಿಮಾನಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಾರ ಸಂಖ್ಯೆಯ ಅಭಿಮಾನಿಗಳು ಸ್ಟೇಡಿಯಂ ಬಳಿ ಆಗಮಿಸಿದ ಹಿನ್ನೆಲೆ ಕಾಲ್ತುಳಿತ ಉಂಟಾಗಿದೆ.
ಬುಧವಾರ ಸಂಜೆ ಏಕಾಏಕಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನುಗ್ಗಿದರು. ಸ್ಟೇಡಿಯಂ ಭರ್ತಿಯಾದ ಹಿನ್ನೆಲೆ ಗೇಟ್‌ ಬಂದ ಮಾಡಲಾಗಿತ್ತು. ಈ ವೇಳೆ ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ. ಅಪಾರ ಸಂಖ್ಯೆಯಲ್ಲಿ ಒಳಗೆ ನುಗ್ಗಲು ಯತ್ನಿಸಿದಾಗ ಗೇಟ್‌ ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ.
ಹಲವರ ಸ್ಥಿತಿ ಗಂಭೀರ
ಕಬ್ಬಿಣದ ಬೃಹದಾಕಾರದ ಗೇಟ್‌ ಕುಸಿದ ಕೂಡಲೇ ಅದನ್ನು ಹಿಡಿದು ನಿಂತಿದ್ದ ಗೇಟ್‌ ಕೆಳಗೆ ಸಿಲುಕಿಕೊಂಡರು. ಆ ಪೈಕಿ 10 ಮಂದಿಗೆ ಹೆಚ್ಚಿನ ಗಾಯಗಳಾದವು. 4 ಮಂದಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ. ಪೊಲೀಸರು ಆಂಬ್ಯುಲೆನ್ಸ್‌ ಸಹಾಯದಿಂದ ಸಮೀಪದ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ಗಾಯಾಳುಗಳನ್ನು ಒಯ್ದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ವ್ಯಕ್ತಿಯನ್ನು ಎತ್ತಿ ನೆಲಕ್ಕೆ ಒಗೆದು, ಎಳೆದಾಡಿ, ತುಳಿದಾಡಿದ ಬೀದಿ ಗೂಳಿ ; ದೃಶ್ಯ ಕ್ಯಾಮೆರಾದಲ್ಲಿ ಸೆರೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement