ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ.
ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) ಎಂಬ ಬಾಲಕ ಮನೆಯಲ್ಲಿ ಮೊಬೈಲ್‌ ನೋಡುತ್ತ ನಿದ್ದೆಗೆ ಜಾರಿದ್ದ. ಆಗ ಮನೆಯೊಳಗೆ ನುಸುಳಿದ್ದ ವಿಷದ ಹಾವು ಬಾಲಕನ ಕೈಗೆ ಕಚ್ಚಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದ.
ಆದರೆ ಬಾಲಕನಿಗೆ ಕಚ್ಚಿದ ಹಾವು 3 ದಿನಗಳ ವರೆಗೂ ಹಾವು ತಾನು ಬಾಲಕನಿಗೆ ಕಚ್ಚಿದ ಸ್ಥಳದಲ್ಲಿ ಉಳಿದುಕೊಂಡಿತ್ತು. ಬಾಲಕನ ಅಂತ್ಯಕ್ರಿಯೆಯ ವಿಧಿ ವಿಧಾನ ಮುಗಿಸಿದ ನಂತರವೂ ಆ ಹಾವು ಅಲ್ಲಿಂದ ಕದಲಿರಲಿಲ್ಲ. ಆದರೆ ಮಗನನ್ನು ಕಳೆದುಕೊಂಡ ಧುಃಖದ ನಡುವೆಯೂ ಕುಟುಂಬಸ್ಥರು ಆ ಹಾವನ್ನು ಕೊಲ್ಲುವ ಮನಸ್ಸು ಮಾಡಲಿಲ್ಲ. ಅದರ ಬದಲಿಗೆ ಉರಗ ರಕ್ಷಕರಿಗೆ ಮಾಹಿತಿ ನೀಡಿ ಹಾವನ್ನು ಸೆರೆ ಹಿಡಿಸಿದರು. ನಂತರ ಕಾಡಿಗೆ ಬಿಡಲಾಯಿತು. ತಮ್ಮ ಮಗನಿಗೆ ಕಚ್ಚಿದ ಹಾವಿಗೆ ತೊಂದರೆ ಕೊಡದೆ ಅದನ್ನು ರಕ್ಷಿಸಿ ಕಾಡಿಗೆ ಬಿಟ್ಟ ಕುಟುಂಬದ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

4.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement