ಬೆಂಗಳೂರು : ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ.
ಗುರುವಾರ ರಾತ್ರಿ ಕೆಎಸ್ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ ತಿಳಿಸಿದ್ದಾರೆ.
ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಚರಿಸಲು ಆಯೋಜಿಸಿದ್ದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿದ ಘಟನೆ ಸಂಭವಿಸಿದೆ.
ಶನಿವಾರ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ, ಅವರ ‘ಪಾತ್ರವು ತುಂಬಾ ಸೀಮಿತವಾಗಿದ್ದರೂ’ ದುರಂತಕ್ಕೆ ತಾವು ನೈತಿಕ ಜವಾಬ್ದಾರಿ ಹೊತ್ತಿದ್ದಾಗಿ ತಿಳಿಸಿದ್ದಾರೆ.
ದುರಂತದ ನಂತರ ಹಲವಾರು ರಾಜಕೀಯ ನಾಯಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದ್ದು, ಆರ್ಸಿಬಿ, ಕೆಎಸ್ಸಿಎ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಎಂಟರ್ಟೈನ್ಮೆಂಟ್ ವಿರುದ್ಧ ಪ್ರಕರಣ ದಾಖಲಾಗಿದೆ.
“ಕಳೆದ ಎರಡು ದಿನಗಳಲ್ಲಿ ನಡೆದ ಅನಿರೀಕ್ಷಿತ ಮತ್ತು ದುರದೃಷ್ಟಕರ ಘಟನೆಗಳಿಂದಾಗಿ ಮತ್ತು ನಮ್ಮ ಪಾತ್ರವು ಬಹಳ ಸೀಮಿತವಾಗಿದ್ದರೂ, ನೈತಿಕ ಜವಾಬ್ದಾರಿಯಿಂದಾಗಿ, ನಿನ್ನೆ ರಾತ್ರಿ ನಾವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಕಾರ್ಯದರ್ಶಿ ಮತ್ತು ಖಜಾಂಚಿ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಲು ಬಯಸುತ್ತೇವೆ” ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಎಸ್ಸಿಎ ಅಧ್ಯಕ್ಷ ರಘುರಾಮ ಭಟ್, ಕಾರ್ಯದರ್ಶಿ ಶಂಕರ ಮತ್ತು ಖಜಾಂಚಿ ಜಯರಾಮ ಅವರು ಹೈಕೋರ್ಟ್ ಗೆ ಪ್ರತಿಕ್ರಿಯೆ ನೀಡಿ, ಚಿನ್ನಸ್ವಾಮಿ ಸ್ಟೇಡಿಯಂನ ಗೇಟ್ ನಿರ್ವಹಣೆ ಮತ್ತು ಜನಸಂದಣಿ ನಿರ್ವಹಣೆ ಸಂಘದ ಜವಾಬ್ದಾರಿಯಲ್ಲ. ವಿಧಾನಸೌಧದಲ್ಲಿ ಆರ್ಸಿಬಿ ಐಪಿಎಲ್ ಆಚರಣೆಗಳನ್ನು ನಡೆಸಲು ಅನುಮತಿ ಕೋರಿದ್ದೆವು ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸನ್ಮಾನ ಸಮಾರಂಭವು ಯಾವುದೇ ಪ್ರಮುಖ ಅಡಚಣೆಗಳಿಲ್ಲದೆ ನಡೆದರೂ, ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಅವ್ಯವಸ್ಥೆ ಭುಗಿಲೆದ್ದಿತು, ಅಲ್ಲಿ ಆರ್ಸಿಬಿಯ ಸೋಷಿಯಲ್ ಮೀಡಿಯಾ ಪೇಜ್ ಅನುಸರಿಸಿ ಲಕ್ಷಾಂತರ ಜನರು ಸೇರಿದ್ದರು, ಕೊನೆಗೆ ಪರೇಡ್ ರದ್ದಾದಾಗ ಸೋಷಿಯಲ್ ಮೀಡಿಯಾ ಪೇಜ್ ನಿಂದ ಮೆಸೇಜ್ ಅಳಿಸಿಹಾಕಲಾಗಿತ್ತು.
ಆರ್ ಸಿಬಿ ಆಟಗಾರರ ಯೋಜಿತ ವಿಜಯೋತ್ಸವ ಮೆರವಣಿಗೆಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಲಾಗಿತ್ತು. ಹೊರಗೆ ನಡೆದ ದುರಂತದ ಹೊರತಾಗಿಯೂ ಕ್ರೀಡಾಂಗಣದೊಳಗಿನ ಕಾರ್ಯಕ್ರಮ ಮುಂದುವರೆಯಿತು.
ನಿಮ್ಮ ಕಾಮೆಂಟ್ ಬರೆಯಿರಿ