ಮಂಗಳೂರು | ಸುಹಾಸ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎ ಹೆಗಲಿಗೆ

ಮಂಗಳೂರು: ರೌಡಿಶೀಟರ್ ಹಾಗೂ ಹಿಂದೂಪರ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆಯು ರಾಷ್ಟ್ರೀಯ ತನಿಖಾ ದಳಕ್ಕೆ ( NIA ) ವಹಿಸಿದೆ.
ಸುಹಾಸ ಶೆಟ್ಟಿಯನ್ನು ದುಷ್ಕರ್ಮಿಗಳು ಬಜಪೆಯ ಕಿನ್ನಿಪದವು ಎಂಬಲ್ಲಿ ಮೇ 1ರಂದು ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿದ್ದರು.
ಈ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸ್‌ ಸಿಸಿಬಿ ಘಟಕ ಈ ಪ್ರಕರಣದಲ್ಲಿ ಒಟ್ಟು 11 ಆರೋಪಿಗಳನ್ನು ಬಂಧಿಸಿದೆ. ಬಜಪೆಯ ಸುಹಾಸ ಶೆಟ್ಟಿ ವಿರುದ್ಧ ಕೊಲೆ ಪ್ರಕರಣಗಳೂ ಸೇರಿದಂತೆ ಹಲವು ಪ್ರಕರಣಗಳು ಇವೆ.
ಸುಹಾಸ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಅಲ್ಲದೆ, ಪ್ರಕರಣದ ತನಿಖೆಯನ್ನುಎನ್‌ಐಎಗೆ ನೀಡುವಂತೆ ಸುಹಾಸ್ ಶೆಟ್ಡಿ ಪೋಷಕರು‌ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಸುಹಾಸ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಐಗೆ ವರ್ಗಾಯಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಧನ್ಯವಾದ ತಿಳಿಸಿದ್ದಾರೆ. ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ಈಗ ಎಸ್‌ಡಿಪಿಐನ ಕಾರ್ಯಕರ್ತರಾಗಿ ತಮ್ಮ ಚಟುವಟಿಕೆಗಳನ್ನು ಮುಂದುವರಿಸಿದ್ದು, ಇಂತಹ ದೇಶ ವಿರೋಧಿ ಶಕ್ತಿಗಳನ್ನು ಕಿತ್ತುಹಾಕುವಂತೆ ಹತ್ಯೆ ನಡೆದ ತಕ್ಷಣ ಕೇಳಿಕೊಂಡಿದ್ದೆ ಎಂದು ಪೋಸ್ಟ್ ಮಾಡಿದ್ದಾರೆ.
(ಮೇ 1ರಂದು ಮಂಗಳೂರು ನಗರದ ಬಜ್ಪೆ ಬಳಿ ಸುಹಾಸ ಶೆಟ್ಟಿಯವರನ್ನು ತಲ್ವಾರಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿರುವ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ

ಪ್ರಮುಖ ಸುದ್ದಿ :-   ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ; ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಘೋಷಣೆ ; ಬದಲಾಗಲಿದೆಯೇ ಬಿಹಾರ ರಾಜಕೀಯ ಚಿತ್ರಣ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement