ಬೆಂಗಳೂರು: ಬಿಜೆಪಿಯು ಕರ್ನಾಟಕ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಚುನಾವಣಾ ಅಧಿಕಾರಿಗಳು ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ.
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಬಾಕಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷರ ಪಟ್ಟಿ
ಮೈಸೂರು ಗ್ರಾಮಾಂತರ – ಕೆ.ಎನ್. ಸುಬ್ಬಣ್ಣ
ಹಾಸನ – ಸಿದ್ದೇಶ ನಾಗೇಂದ್ರ
ಕೊಡಗು – ರವಿ ಕಾಳಪ್ಪ
ಉಡುಪಿ – ಕುತ್ಯಾರು ನವೀನ್ ಶೆಟ್ಟಿ
ದಾವಣಗೆರೆ – ಎನ್.ರಾಜಶೇಖರ
ಹಾವೇರಿ – ವಿರೂಪಾಕ್ಷಪ್ಪ ಬಳ್ಳಾರಿ
ಚಿತ್ರದುರ್ಗ – ಕೆ.ಟಿ. ಕುಮಾರಸ್ವಾಮಿ
ತುಮಕೂರು – ಎಚ್.ಎಸ್. ರವಿಕುಮಾರ (ಹೆಬ್ಬಾಕ)
ಮಧುಗಿರಿ – ಚಿದಾನಂದ ಗೌಡ
ಚಿಕ್ಕಬಳ್ಳಾಪುರ – ಎಸ್.ವಿ. ರಾಮಚಂದ್ರ ಗೌಡ (ಸೀಕಲ್)
ಸತತ ಮೂರನೇ ಬಾರಿಗೆ ಹೆಬ್ಬಾಕ ರವಿಶಂಕರ್ ಆಯ್ಕೆ
ಜನವರಿಯಲ್ಲಿ 23 ಜಿಲ್ಲೆಗಳಿಗೆ ಬಿಜೆಪಿಯು ಜಿಲ್ಲಾಧ್ಯಕ್ಷರ ನೇಮಕ ಮಾಡಿತ್ತು. ಬೇರೆಬೇರೆ ಕಾರಣಗಳಿಂದ 10 ಜಿಲ್ಲಾ ಘಟಕಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರಲಿಲ್ಲ. ಈಗ ಬಾಕಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ