ದಾಂಡೇಲಿ | ವೃದ್ಧೆ ಮೇಲೆ ಅತ್ಯಾಚಾರ ಪ್ರಕರಣ ; ಪರಾರಿಯಾಗಿದ್ದ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರ ವ್ಯಾಪ್ತಿಯಲ್ಲಿ 60 ವರ್ಷದ ವೃದ್ಧೆಯ ಮೇಲೆ ನಡೆದ ಅತ್ಯಾಚಾರ ಹಾಗೂ ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 12ರಂದು ದಾಂಢೇಲಿಯ ಐಪಿಎಂ ಅರಣ್ಯ ಪ್ರದೇಶದಲ್ಲಿ ವೃದ್ಧೆಯ ಮೇಲೆ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಪೈರೋಜ್‌ ಯಾಸೀನ್‌ ಯರಗಟ್ಟಿ (23 ) ಶನಿವಾರ (ಜೂನ್ 14) ದಾಂಡೇಲಿ ಗ್ರಾಮೀಣ ಠಾಣೆ ವ್ಯಾಪ್ತಿಯ ಕುಳಗಿ ರಸ್ತೆಯ ಅರಣ್ಯ ಪ್ರದೇಶದಲ್ಲಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿಯ ಆಧಾರದ ಮೇಲೆ ದಾಂಡೇಲಿ ನಗರ ಠಾಣೆ ಪಿಎಸ್​​ಐ ಕಿರಣ ಪಾಟೀಲ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಲು ತೆರಳಿದ್ದರು.

ಆದರೆ ಈ ವೇಳೆ ಆರೋಪಿ ಪೈರೋಜ ಕಲ್ಲು ಮತ್ತು ಚಾಕುವಿನಿಂದ ಪಿಎಸ್​ಐ ಮತ್ತು ಪೊಲೀಸ್‌ ಸಿಬ್ಬಂದಿಯ ಮೇಲೆ ಪಲೀಸರ ಮೇಲೆಯೇ ದಾಳಿ ನಡೆಸಿ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದಾನೆ. ಆಗ ಪಿಎಸ್​​ಐ ಕಿರಣ ಪಾಟೀಲ ಅವರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಆದರೂ ಆರೋಪಿ ಹಲ್ಲೆಗೆ ಮುಂದಾದಾಗ, ಆತನ ಎಡಗಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಪಿಎಸ್​​ಐ ಕಿರಣ ಪಾಟೀಲ ಮತ್ತು ಸಿಬ್ಬಂದಿ ಕೃಷ್ಣಪ್ಪ ಬೆಳ್ಳವರಿ, ಇಮ್ರಾನ್ ಕಂಬಾರಗಣವಿ ದಾಂಡೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡೇಟು ತಿಂದ ಆರೋಪಿ ಪೈರೋಜ ಯಾಸೀನ್‌ ಯರಗಟ್ಟಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ರಕ್ಷಣಾ ವ್ಯವಸ್ಥೆ ಭೇದಿಸಿ ಇಸ್ರೇಲ್ ರಕ್ಷಣಾ ಕೇಂದ್ರ ಕಚೇರಿಗೆ ಅಪ್ಪಳಿಸಿದ ಇರಾನ್‌ ಕ್ಷಿಪಣಿ : ಅದು ಅಪ್ಪಳಿಸಿದ ಕ್ಷಣದ ದೃಶ್ಯ ವೀಡಿಯೊದಲ್ಲಿ ಸೆರೆ

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement