ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಇಂದು (ಭಾನುವಾರ) ನಸುಕಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ.
ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ರ ದೇವಿಮನೆ ಘಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು, ಮರಗಳು ಬಂದು ಬಿದ್ದಿದೆ. ಈ ಕಾರಣದಿಂದ ಶಿರಸಿ-ಕುಮಟಾ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಎರಡು ದಿನಗಳ ಅವಧಿಯಲ್ಲಿ ಘಟ್ಟದಲ್ಲಿ ಇದು ಎರಡನೇ ಭೂಕುಸಿತವಾಗಿದೆ.
ಶಿರಸಿ ತಾಲೂಕಿನಲ್ಲಿಯೂ ಶನಿವಾರದಿಂದ ಮಳೆ ಜೋರಾಗಿ ಸುರಿಯುತ್ತಿದ್ದು, ಶನಿವಾರ ಹಾಗೂ ಭಾನುವಾರದ ನಡುವಿನ ತಡರಾತ್ರಿಯ ೨:೩೦ರ ಸುಮಾರಿಗೆ ಭೂ ಕುಸಿತ ಉಂಟಾಗಿದೆ ಎಂದು ಹೇಳಲಾಗಿದೆ. ಭಾರಿ ಪ್ರಮಾಣದಲ್ಲಿ ಮಣ್ಣು ರಸ್ತೆಯಲ್ಲಿ ಬಿದ್ದಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ರಸ್ತೆ ನಿರ್ಮಾಣ ಕಂಪನಿಯಿಂದ ತೆರವು ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ