ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಮೂರ್ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಬಹುತೇಕ ರಾತ್ರಿ ವೇಳೆಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ.
ಈ ಮಾರ್ಗದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹಾಗೂ ಮತ್ತೆ ಕುಸಿಯುವ ಆತಂಕವಿರುವುದರಿಂದ ಸಂಜೆ 6 ಗಂಟೆಯಿದ ಬೆಳಿಗ್ಗೆ 6 ಗಂಟೆ ವರೆಗೆ ಶಿರಸಿ-ಕುಮಟಾ ರಸ್ತೆ ಮಾರ್ಗವಾಗಿ ಯಾವುದೇ ವಾಹನ ಓಡಾಡುವುದನ್ನು ನಿಷೇಧಿಸಲಾಗಿದೆ.
ಈಗಾಗಲೇ ಈ ಮಾರ್ಗದಲ್ಲಿ ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಈಗ ಭಾರಿ ಮಳೆ ಆಗುತ್ತಿರುವ ಕಾರಣ ದೇವಿಮನೆ ಘಟ್ಟ ಪ್ರದೇಶದ ರಸ್ತೆ ಮಾರ್ಗದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿದ್ದು, ರಸ್ತೆ ಮೇಲೆ ಬಿದ್ದ ಮಣ್ಣು ತೆರವು ಮಾಡಲಾಗಿದೆ. ಮತ್ತೆ ಕುಸಿಯುವ ಆತಂಕವಿರುವುದರಿಂದ ಸಂಜೆ 6 ಗಂಟೆಯಿದ ಬೆಳಿಗ್ಗೆ 6 ಗಂಟೆ ವರೆಗೆ ಶಿರಸಿ-ಕುಮಟಾ ರಸ್ತೆ ಮಾರ್ಗವಾಗಿ ಯಾವುದೇ ವಾಹನ ಓಡಾಡುವುದನ್ನು ನಿಷೇಧಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ