500 ರೂ. ಲಂಚ ಪಡೆದ ಪ್ರಕರಣ : ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ : 30 ವರ್ಷದ ಹಿಂದೆ ಪಡೆದಿದ್ದ 500 ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತಿಯಾದ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆಯಾಗಿದೆ. ಅಣ್ಣ-ತಮ್ಮಂದಿರ ಹೆಸರಿಗೆ ಜಮೀನು ಖಾತೆ ಮಾಡಿಕೊಡಲು 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಿಗನಿಗೆ ಸುಪ್ರೀಂ ಕೋರ್ಟ್‌ ಶಿಕ್ಷೆ ವಿಧಿಸಿದೆ.
ನಾಗೇಶ ಶಿವಂಗೇಕರ ಎಂಬವರು ಜೈಲು ಪಾಲಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ. ಇನ್ನೊಂದು ವಿಚಿತ್ರವೆಂದರೆ ಈ ಪ್ರಕರಣದಲ್ಲಿ ದೂರುದಾರ ವ್ಯಕ್ತಿ ಮೃತಪಟ್ಟು ಐದು ಕಳೆದಿದೆ.
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಎಂಬವರ ಬಳಿ 500 ರೂ. ಲಂಚ ಸ್ವೀಕಾರ ಪ್ರಕರಣ ಇದಾಗಿದೆ. ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಉತಾರ ಕೊಡಲು 500 ರೂಪಾಯಿ ಲಂಚ ನೀಡುವಂತೆ ನಾಗೇಶ ಶಿವಂಗೇಕರ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಕಟಾಂಬಳೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 500 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಿಡಿದಿದ್ದರು.
2006ರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು ಮತ್ತು 1 ಸಾವಿರ ರೂ ದಂಡ ವಿಧಿಸಲಾಗಿತ್ತು. ಬಳಿಕ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದ ನಾಗೇಶ್ ಶಿವಂಗೇಕರ ನಿರಪರಾಧಿ ಎಂದು ತೀರ್ಪು ನೀಡಿತ್ತು. ಆದರೆ ಹೈಕೋರ್ಟ್ ‌ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್​ನಿಂದ ಲೋಕಾಯುಕ್ತ ಪರ ತೀರ್ಪು ಪ್ರಕಟವಾಗಿದ್ದು, ಕೆಲಸದಿಂದ ನಿವೃತ್ತಿಯಾಗಿ 10 ವರ್ಷದ ಬಳಿಕ ಆರೋಪಿ ಮತ್ತೆ ಜೈಲು ಪಾಲಾಗಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೂನ್‌ 21ರಿಂದ 4 ದಿನ ಜೋರಾದ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement