ಕನಸಿನಲ್ಲಿ ಕಾಣಿಸಿಕೊಂಡ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ

ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿ ಬಂದಿರುವ ವಿದ್ಯಮಾನ ಯಾದಗಿರಿಯಲ್ಲಿ ನಡೆದಿದೆ.
ಇಲ್ಲಿನ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ ಎಂಬುವರು ಕುಟುಂಬ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್‌ ಆಗಿದ್ದಾರೆ. ಇದಕ್ಕೆ ಕಾರಣ ಆಂಜನೇಯನಂತೆ. ಕನಸಿನಲ್ಲಿ ಆಂಜನೇಯ ಪದೇಪದೇ ಕಾಣಿಸಿಕೊಂಡಿದ್ದರಿಂದ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ ಹೇಳಿದ್ದಾರೆ.
ಕೆಲ ವರ್ಷಗಳ ಹಿಂದೆ ವೆಂಕಟೇಶ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಮತಾಂತರಗೊಂಡ ನಂತರ ವೆಂಕಟೇಶ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ. ಯಾವ ಕೆಲಸಕ್ಕೆ ಕೈ ಹಾಕಿದರೂ ಕೈಹಿಡಿಯುತ್ತಿರಲಿಲ್ಲ. ಇದರ ನಡುವೆ ವೆಂಕಟೇಶ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದನಂತೆ. ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದನಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರೈಸ್ತ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದೇನೆ ಎಂದು ಹೇಳಿದ್ದಾರೆ.
ವೆಂಕಟೇಶ ಕುಟುಂಬವು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮರಳಿ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡಿದೆ. ಹಿಂದೂ ಧರ್ಮಕ್ಕೆ ಮರಳಿ ಬಂದ ವೆಂಕಟೇಶ ಹಾಗೂ ಪತ್ನಿ, ಇಬ್ಬರು ಮಕ್ಕಳನ್ನು ಬಜರಂಗದಳ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement