ಬೆಂಗಳೂರು : ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಮೂರು ದಿನ 6 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಜೂ 23ರಂದು ಭಾರೀ ಮಳೆಯಾಗಲಿದೆ. ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮಳೆಯ ಹೆಚ್ಚಲಿದೆ. ಬೆಂಗಳೂರಲ್ಲಿ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಹಾಗೂ ಮಲೆನಾಡಿನಾದ್ಯಂತ ಮಳೆಯ ಅಬ್ಬರ ಹೆಚ್ಚಲಿದ್ದು, ರಾಜ್ಯದ ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂ 23ರಿಂದ ಮೂರು ದಿನ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜೂನ್ 29 ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಜೂನ್ 26 ರ ನಂತರ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ ಹಾಗೂ ವಿಜಯಪುರಕ್ಕೆ ಯೆಲ್ಲೋ ಅಲೆರ್ಟ್ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ