ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಈ ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರಿದ್ದರು ಎಂದು ಹೇಳಲಾಗಿದೆ. ಆದರೆ ಯಾರಿಗೂ ಹೆಚ್ಚಿನ ಅಪಾಯ ಆಗಿಲ್ಲ ಎನ್ನಲಾಗಿದೆ.
ಈ ಘಟನೆಗೂ ಮುನ್ನ, ಸ್ಥಳೀಯರು ವಿದ್ಯುತ್ ಕಂಬದ ಬಗ್ಗೆ ಹೆಸ್ಕಾಂಗೆ ಮಾಹಿತಿ ನೀಡಿದ್ದರು. ಹೀಗಾಗಿ ಮೊದಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು, ಇದು ಕಾರ್ಮಿಕರ ಪ್ರಾಣ ಉಳಿಸಲು ಸಹಾಯ ಮಾಡಿತು. ಸ್ಥಳೀಯ ಕೆಲ ಮಾಧ್ಯಮ ವರದಿಗಳ ಪ್ರಕಾರ, ದೊಡ್ಡ ಅನಾಹುತವಾಗುವುದು ತಪ್ಪಿದೆ.
ನಿಮ್ಮ ಕಾಮೆಂಟ್ ಬರೆಯಿರಿ