88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಆಯ್ಕೆಯಾಗಿದ್ದಾರೆ.
ಬಳ್ಳಾರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ಮಹೇಶ ಜೋಶಿ ಈ ವಿಷಯ ತಿಳಿಸಿದರು.
ಬಳ್ಳಾರಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕ‌ರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದೇ ವೇಳೆ ಬೂಕ‌ರ್ ಪ್ರಶಸ್ತಿ ಪುರಸ್ಕೃತ ಲೇಖಕಿ, ಅನುವಾದಕಿ ದೀಪ ಭಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚೆಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್‌ ಪುರಸ್ಕಾರ 2025ಕ್ಕೆ (International Booker Prize 2025) ಸಾಹಿತಿ ಬಾನು ಮುಷ್ತಾಕ್‌ ಅವರ ʼಹಸೀನಾ ಮತ್ತು ಇತರ ಕತೆಗಳುʼ ಸಣ್ಣಕತೆಗಳ ಸಂಕಲನದ ಇಂಗ್ಲಿಷ್‌ ಅನುವಾದ ʼಹಾರ್ಟ್‌ ಲ್ಯಾಂಪ್‌ʼಗೆ ಬೂಕರ್‌ ಪ್ರಶಸ್ತಿ ದೊರೆತಿತ್ತು.
ಕುಬ್ರ, ಬಡವರ ಮಗಳು ಹೆಣ್ಣಲ್ಲ- ಅವರ ಕಾದಂಬರಿಗಳು. ಹೆಜ್ಜೆ ಮೂಡದ ಹಾದಿ, ಬೆಂಕಿಮಳೆ, ಎದೆಯ ಹಣತೆ ಇವು ಕಥಾಸಂಕಲನಗಳು. ಫಾರಸಿ ಕೃತಿ ತಾರೀಖ್ -ಎ-ಫೆರಿಸ್ತಾವನ್ನು ಉರ್ದುವಿನಿಂದ ಕನ್ನಡೀಕರಿಸಿದ್ದಾರೆ. ಕರಿನಾಗರಗಳು ಕತೆಯನ್ನು ಆಧರಿಸಿ ಗಿರೀಶ್ ಕಾಸರವಳ್ಳಿ ಅವರು ’ಹಸೀನಾ’ ಚಿತ್ರ ನಿರ್ದೇಶಿಸಿದ್ದರು. ಇದಕ್ಕೆ 3 ರಾಷ್ಟ್ರ ಪ್ರಶಸ್ತಿಗಳು ಸಂದಿವೆ.

ಪ್ರಮುಖ ಸುದ್ದಿ :-   ಬೆಂಗಳೂರು : ಮಹಿಳೆ ಶವವನ್ನು ಮೂಟೆಕಟ್ಟಿ ತುಂಬಿ ಕಸದ ಲಾರಿಯಲ್ಲಿ ಎಸೆದು ಪರಾರಿ

ಬಾನು ಅವರ ಅನೇಕ ಕತೆಗಳು ಹಿಂದಿ, ಇಂಗ್ಲಿಷ್, ಉರ್ದು, ಮಲಯಾಳಂ, ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಪದ್ಮಭೂಷಣ ಬಿ.ಸರೋಜದೇವಿ ಸಾಹಿತ್ಯ ಪ್ರಶಸ್ತಿ, ಒಮ್ಮೆ ಹೆಣ್ಣಾಗು ಪ್ರಭುವೆ ನಾಟಕ ರೂಪಾಂತರಕ್ಕೆ ಇಂಟರ್ ನ್ಯಾಷನಲ್ ವುಮನ್ ಫಾರ್‌ ರೇಡಿಯೋ ಆ್ಯಂಡ್ ಟೆಲಿವಿಷನ್ ಬಹುಮಾನ, ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ. ಸಾವಿತ್ರಮ್ಮ ದತ್ತಿನಿಧಿ ಬಹುಮಾನ ಹಾಗೂ ಗುಡಿಬಂಡೆ ಪೂರ್ಣಿಮಾ ದತ್ತಿನಿಧಿ ಬಹುಮಾನ, ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಪ್ರಶಸ್ತಿ, ಸುಧಾಮೂರ್ತಿ ಪ್ರಶಸ್ತಿಗಳು ಬಂದಿವೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement