ನೇರ ಪ್ರಸಾರದ ವೇಳೆ ಇರಾನ್‌ ಸರ್ಕಾರಿ ಟಿವಿ ಕೇಂದ್ರದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ; ಅರ್ಧಕ್ಕೇ ಹೊರನಡೆದ ನಿರೂಪಕಿ ; ದೃಶ್ಯ ವೀಡಿಯೊದಲ್ಲಿ ಸೆರೆ

ಇರಾನ್‌ನ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಅದರ ರಾಜಧಾನಿ ತೆಹ್ರಾನ್‌ನಲ್ಲಿ ಆಕಾಶದಿಂದ ಇಸ್ರೇಲ್‌ ಕ್ಷಿಪಣಿಗಳ ಮಳೆ ಗೈಯುತ್ತಿದೆ. ಈಗಾಗಲೇ ಇಸ್ರೇಲ್ ತಾನು ಇರಾನ್‌ ಮೇಲೆ ʼಸಂಪೂರ್ಣ ವಾಯು ಪ್ರಾಬಲ್ಯʼವನ್ನು ಹೊಂದಿರುವುದಾಗಿ ಹೇಳಿಕೊಂಡಿದೆ. ಎರಡು ಪ್ರಮುಖ ಪ್ರತಿಸ್ಪರ್ಧಿಗಳ ನಡುವಿನ ಸಂಘರ್ಷವು ಘಾತೀಯವಾಗಿ ಬೆಳೆಯುತ್ತಿದೆ. ಈಗ ಇಸ್ರೇಲಿನ ಅಂತಹ ಒಂದು ವಾಯು ದಾಳಿಯಲ್ಲಿ, ಇಸ್ರೇಲಿ ಕ್ಷಿಪಣಿಯು ನೇರ ಪ್ರಸಾರ ಕಾರ್ಯಕ್ರಮ … Continued

ವೀಡಿಯೊ | ನಾವು ಭಾರತದ ಐಪಿಎಲ್ ಫ್ಲಡ್‌ಲೈಟ್‌ ಆಫ್‌ ಮಾಡಿದ್ದೇವೆ : ವಿಚಿತ್ರ ಹೇಳಿಕೆಯಿಂದ ನಗೆಪಾಟಲಿಗೀಡಾದ ಪಾಕ್ ರಕ್ಷಣಾ ಸಚಿವ-ವೀಕ್ಷಿಸಿ

ನವದೆಹಲಿ: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ತಮ್ಮ ವಿಲಕ್ಷಣ ಹೇಳಿಕೆಗಳಿಂದ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಈ ಬಾರಿ “ಐಪಿಎಲ್ ಫ್ಲಡ್‌ಲೈಟ್‌ಗಳನ್ನು ಪಾಕಿಸ್ತಾನದವರು ಹ್ಯಾಕಿಂಗ್ ಮಾಡಿದ್ದರು” ಎಂದು ಹೇಳುವ ಮೂಲಕ ಮತ್ತೊಮ್ಮೆ ನಗೆಪಾಟಲಿಗೀಡಾಗಿದ್ದಾರೆ. ಪಾಕಿಸ್ತಾನದ ಸಂಸತ್ತಿನಲ್ಲಿ ಮಾತನಾಡಿದ ಖವಾಜಾ ಆಸಿಫ್ ಅವರು , ತಮ್ಮ ದೇಶದ “ಸೈಬರ್ ವಾರಿಯರ್ಸ್” ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ … Continued

ಬೆಂಗಳೂರು ಮಹಿಳೆಗೆ ಬ್ಲ್ಯಾಕ್‌ ಮೇಲ್, ಅತ್ಯಾಚಾರ ಯತ್ನ: ಕೇರಳ ಅರ್ಚಕನ ಬಂಧನ

ಬೆಂಗಳೂರು: ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಕೇರಳದ ಅರ್ಚಕರೊಬ್ಬರನ್ನು ಬಂಧಿಸಿದ್ದಾರೆ ಮತ್ತು ತಲೆಮರೆಸಿಕೊಂಡಿರುವ ಇನ್ನೊಬ್ಬ ಅರ್ಚಕನಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ವ್ಯಕ್ತಿಯನ್ನು ಕೇರಳದಲ್ಲಿರುವ ಪೆರಿಂಗೊಟ್ಟುಕರ ದೇವಸ್ಥಾನದ ಅರುಣ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಲಯದ ಪ್ರಧಾನ ಅರ್ಚಕ ಉನ್ನಿ ದಾಮೋದರನ್‌ … Continued

ಇಸ್ರೇಲ್-ಇರಾನ್ ಯುದ್ಧ ಉಲ್ಬಣ | ಭೂಗತ ಬಂಕರ್‌ನಲ್ಲಿ ಅಡಗಿದ ಇರಾನ್‌ ಸರ್ವೋಚ್ಚ ನಾಯಕ ಖಮೇನಿ-ಕುಟುಂಬ : ವರದಿ

ಇಸ್ರೇಲ್‌- ಇರಾನ್‌ನ ಸಂಘರ್ಷದ ಮಧ್ಯೆ ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರನ್ನು ಈಶಾನ್ಯ ತೆಹ್ರಾನ್‌ನಲ್ಲಿರುವ ಭೂಗತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಇರಾನ್ ಇಂಟರ್‌ನ್ಯಾಷನಲ್ ವರದಿ ಮಾಡಿದೆ. ಖಮೇನಿ ಅವರ ಮಗ ಮೊಜ್ತಬಾ ಸೇರಿದಂತೆ ಅವರ ಕುಟುಂಬದ ಎಲ್ಲಾ ಸದಸ್ಯರು ಸಹ ಅವರೊಂದಿಗೆ ಇದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿ ತಿಳಿಸಿದೆ. ವರದಿಯ ಪ್ರಕಾರ, … Continued

ವೀಡಿಯೊ..| ಬೆಂಗಳೂರು : ವೇಗವಾಗಿ ಚಾಲನೆ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಮಹಿಳೆ ಕೆನ್ನೆಗೆ ಬಲವಾಗಿ ಹೊಡೆದ ರ‍್ಯಾಪಿಡೋ ಚಾಲಕ ; ಕೆಳಕ್ಕೆ ಬಿದ್ದ ಮಹಿಳೆ

ಬೆಂಗಳೂರು : ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಬೆಂಗಳೂರಿನ ಜಯನಗರ ಪ್ರದೇಶದ ಪಾದರಕ್ಷೆಗಳ ಶೋರೂಂ ಬಳಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕ ಅತಿವೇಗದ ಚಾಲನೆ ಮಾಡಿದ್ದಾನೆ ಎಂಬ ಕಾರಣಕ್ಕೆ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಾಗ್ವಾದ ಪ್ರಾರಂಭವಾಯಿತು ಎಂದು ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, … Continued

ಅಹಮದಾಬಾದ್ ವಿಮಾನ ದರಂತ | ವಿಮಾನ ಬಿದ್ದು ಹೊತ್ತಿ ಉರಿಯುತ್ತಿದ್ದ ಸ್ಥಳದಿಂದ ಬದುಕುಳಿದ ಏಕೈಕ ವ್ಯಕ್ತಿ ನಡೆದು ಬರುವ ಹೊಸ ವೀಡಿಯೊ ವೈರಲ್‌

ಗಾಂಧಿನಗರ: ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ-171 ವಿಮಾನ (Air India) ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸಕುಮಾರ ರಮೇಶ ಅವರು, ವಿಮಾನ ಅಪಘಾತವಾದ ಸ್ಥಳದಿಂದ ಹೊರಬರುತ್ತಿರುವುದನ್ನು ತೋರಿಸುವ ಹೊಸ ವೀಡಿಯೊವೊಂದು ಹೊರಬಿದ್ದಿದೆ. ಹೊತ್ತಿ ಉರಿಯುತ್ತಿರುವ ವಿಮಾನದಿಂದ ವ್ಯಕ್ತಿ ಪಾರಾಗಿ ಬಂದಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಳದ ಕ್ಯಾಂಪಸ್‌ನಿಂದ ಅವರು ಹೊರಗೆ ಹೋಗುತ್ತಿದ್ದಾಗ, ಬೆಂಕಿ … Continued

ಶಿರಸಿ-ಕುಮಟಾ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಮೂರ್ನಾಲ್ಕು ಬಾರಿ ಗುಡ್ಡ ಕುಸಿತ ಉಂಟಾಗಿದೆ. ಬಹುತೇಕ ರಾತ್ರಿ ವೇಳೆಯೇ ಗುಡ್ಡ ಕುಸಿತ ಆಗುವುದನ್ನು ಪರಿಗಣಿಸಿ ಈ ಮಾರ್ಗವಾಗಿ ರಾತ್ರಿ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಹಾಗೂ ಮತ್ತೆ ಕುಸಿಯುವ ಆತಂಕವಿರುವುದರಿಂದ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ 3 ದಿನ ಮಳೆ ಅಬ್ಬರ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 16 ರಿಂದ 18 ರವರೆಗೆ  ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 16 ರಂದು ಕರಾವಳಿಯ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಜೂನ್‌ 17, 18ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಜೂ.16 ರಂದು ಆರೆಂಜ್‌ … Continued

ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭಾನುವಾರ ದೆಹಲಿಯಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ಆಸ್ಪತ್ರೆಯ ಗ್ಯಾಸ್ಟ್ರೋ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ದೃಢಪಡಿಸಿದೆ. ಈ ತಿಂಗಳಲ್ಲಿ 78 ವರ್ಷದ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿ. ಅಧಿಕೃತ ಹೇಳಿಕೆಯ ಪ್ರಕಾರ, … Continued

ಭಾರಿ ಮಳೆ ಮುನ್ಸೂಚನೆ : ಜೂನ್ 16 ರಂದು ದ.ಕ. ಜಿಲ್ಲೆಯ 5 ತಾಲೂಕುಗಳೂ, ಉಡುಪಿ ಜಿಲ್ಲೆ ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ : ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳು ಮತ್ತು ಉಡುಪಿ ಜಿಲ್ಲೆಯ ಎಲ್ಲ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 16ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ … Continued