ತನಗೆ ಆಹಾರ ನೀಡುತ್ತಿದ್ದ ವ್ಯಕ್ತಿಯ ಶವದ ಮುಂದೆ ಕಣ್ಣೀರು ಹಾಕಿದ ಮಂಗ | ವೀಡಿಯೊ ವೈರಲ್‌-ವೀಕ್ಷಿಸಿ

ಸಾಮಾನ್ಯವಾಗಿ ಪ್ರಾಣಿಗಳು ನಿಷ್ಠೆ, ವಾತ್ಸಲ್ಯ ಮತ್ತು ಭಾವನಾತ್ಮಕ ಬುದ್ಧಿವಂತಿಕೆಯು ಪ್ರೀತಿಯನ್ನು ತೋರಿಸುವವರೊಂದಿಗೆ ಅವು ನಿರ್ಮಿಸುವ ಭಾವನಾತ್ಮಕ ಬಂಧಗಳಿಗೆ ಸಾಕ್ಷಿಯಾದ ಅನೇಕ ಉದಾಹರಣೆಗಳಿವೆ. ಜಾರ್ಖಂಡ್‌ನ ದಿಯೋಗಢದಲ್ಲಿ ಇತ್ತೀಚೆಗೆ ನಡೆದ ಹೃದಯಸ್ಪರ್ಶಿ ಘಟನೆಯೊಂದು ಸಾಮಾಜಿಕ ಮಾಧ್ಯಮ ಬಳಕೆದಾರರ ಕಣ್ಣುಗಳನ್ನು ತುಂಬಿಸಿದೆ. ಕೋತಿಯೊಂದು ತನ್ನನ್ನು ಪ್ರೀತಿಯಿಂದ ನೋಡುತ್ತಿದ್ದ ವ್ಯಕ್ತಿ ಮೃತಪಟ್ಟಾಗ ಅವರ ಬಗ್ಗೆ ಅಸಾಧಾರಣ ಪ್ರೀತಿ ಮತ್ತು ಸ್ಮರಣೆಯನ್ನು ಪ್ರದರ್ಶಿಸಿತು. … Continued

ಕುಮಟಾ | ವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್.ಎ. ಹೆಗಡೆ ನಿಧನ

ಕುಮಟಾ : ಖ್ಯಾತ ವಕೀಲರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎ. ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಆರ್.ಎ. ಹೆಗಡೆ ಅವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಹನಿಮೂನ್‌ ಕೊಲೆ ಪ್ರಕರಣ | ರಾಜಾ ರಘುವಂಶಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಪತ್ನಿ ಸೋನಂ ಪ್ರೇಮಿ-ಕೊಲೆ ಸಂಚಿನ ಆರೋಪಿ ; ವೀಡಿಯೊ ವೈರಲ್‌…

ಮೇಘಾಲಯದಲ್ಲಿ ಮಧುಚಂದ್ರದ ಸಮಯದಲ್ಲಿ ಪತಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲ್ಪಟ್ಟ ಇಂದೋರದ ಮಹಿಳೆಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಧುಚಂದ್ರದ ಸಮಯದಲ್ಲಿ ಪತಿ ರಾಜ ರಘುವಂಶಿಯನ್ನು ಹತ್ಯೆ ಮಾಡಲು ಪತ್ನಿ ಸೋನಂ ಹತ್ಯೆಗೆ ಸಂಚು ರೂಪಿಸಿದ್ದಳು ಎನ್ನುವ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾದ ಮತ್ತೊಂದು ವೀಡಿಯೊ ಹೊರಬಿದ್ದಿದೆ. ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ … Continued

ಆಗಸ್ಟ್‌ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) … Continued

ಅಮೆರಿಕ ವಿಮಾನ ನಿಲ್ದಾಣದಲ್ಲಿ ಭಾರತೀಯ ವ್ಯಕ್ತಿಯ ಕೈಗೆ ಕೋಳ ಹಾಕಿ ನೆಲಕ್ಕೆ ಕೆಡವಿ ಒತ್ತಿ ಹಿಡಿದ ವೀಡಿಯೊ ವೈರಲ್‌

ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಭಾರತೀಯ ವ್ಯಕ್ತಿಯೊಬ್ಬರಿಗೆ ಕೈಕೋಳ ಹಾಕಿ ನೆಲಕ್ಕೆ ಬೀಳಿಸಿ ಒತ್ತಿ ಹಿಡಿದಿರುವ ಆತಂಕಕಾರಿ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ಹಂಚಿಕೊಂಡ ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು, ಜೂನ್ 7 ರಂದು ವಿದ್ಯಾರ್ಥಿಯನ್ನು ವಿಮಾನ ಕಳುಹಿಸಲು ನಿರ್ಧರಿಸಲಾಗಿತ್ತು ಆದರೆ ಅವರನ್ನುಬಿಟ್ಟು ಹೋಗಲಾಗಿತ್ತು, ನಂತರ ಗಡೀಪಾರು ಮಾಡಲಾಗಿದೆ … Continued

ಭಾರತೀಯ ಗಗನಯಾತ್ರಿ ಒಳಗೊಂಡ ಆಕ್ಸಿಯಮ್ -4 ಮಿಷನ್ ಉಡಾವಣೆ ಮುಂದೂಡಿಕೆ

ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಆಕ್ಸಿಯಮ್ -4 ಮಿಷನ್ ಉಡಾವಣೆಯನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ. ಟ್ವಿಟರ್‌ನಲ್ಲಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಪೋಸ್ಟ್‌ನಲ್ಲಿ ಈ ವಿಷಯ ತಿಳಿಸಿದೆ. “ಹವಾಮಾನ ವೈಪರೀತ್ಯದಿಂದಾಗಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭಾರತೀಯ ಗಗನಯಾತ್ರಿಯನ್ನು ಕಳುಹಿಸುವ ಆಕ್ಸಿಯಮ್ -4 ಮಿಷನ್‌ನ ಉಡಾವಣೆಯನ್ನು … Continued

ಖಾನಾಪುರ | ಕುಸಮಳಿ ಸನಿಹ ಮಲಪ್ರಭಾ ನದಿಯ ಸೇತುವೆ ಬಳಿ ಭೂ ಕುಸಿತ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಭೂ ಕುಸಿತಗಳು ಕಂಡು ಬಂದಿವೆ. ಖಾನಾಪುರ ತಾಲೂಕು ಕುಸಮಳಿ ಬಳಿ ಮಲಪ್ರಭಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಬಳಿ ನೀರಿನ ಹರಿವು ಹೆಚ್ಚಿದೆ. ಇದರಿಂದ ಸೇತುವೆಯ ರಸ್ತೆಯ ಮೇಲೆ ಭೂಕುಸಿತ ಕಂಡು ಬಂದಿದೆ. ಹೀಗಾಗಿ ಭಾನುವಾರ ಸಂಜೆಯಿಂದ ಈ ಮಾರ್ಗವಾಗಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಬೆಳಗಾವಿ ಮತ್ತು … Continued