ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ದಾವಣಗೆರೆ: ಆನ್‍ಲೈನ್ ಗೇಮ್‍ನಲ್ಲಿ (Online Game) 18 ಲಕ್ಷ ರೂ. ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಸರಸ್ವತಿ ನಗರದ ಶಶಿಕುಮಾರ (25) ಎಂದು ಗುರುತಿಸಲಾಗಿದೆ. ಈತ ಆನ್‍ಲೈನ್ ಗೇಮ್‍ ಹುಚ್ಚಿಗೆ ಬಿದ್ದು 18 ಲಕ್ಷ ರೂ. ಕಳೆದುಕೊಂಡಿದ್ದ. ಕಳೆದ ಒಂದು ವರ್ಷದಿಂದ ಹಣ ಹಾಕಿ ಆನ್‌ಲೈನ್‌ … Continued

ವೀಡಿಯೊ…| “ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು”: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

ನವದೆಹಲಿ: ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯಲ್ಲಿ ಪರಮಾಣು ಸಿಡಿತಲೆ ಇರಬಹುದೇ ಎಂದು ನಿರ್ಧರಿಸಲು ತಮ್ಮ ದೇಶದ ಸೇನೆಗೆ ಕೇವಲ 30 ರಿಂದ 45 ಸೆಕೆಂಡುಗಳ ಸಮಯ ಮಾತ್ರ ಇತ್ತು ಎಂದು ಪಾಕಿಸ್ತಾನದ ಉನ್ನತ ರಾಜಕಾರಣಿಯೊಬ್ಬರು ಒಪ್ಪಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ ಹೊಂದಿರುವ ಭಯೋತ್ಪಾದಕರು … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued

ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued

ಅಪಘಾತದಲ್ಲಿ ಮಗ ಸಾವು ; ಸುದ್ದಿ ಕೇಳಿ ಆಘಾತದಿಂದ ತಾಯಿಯೂ ಕುಸಿದುಬಿದ್ದು ಸಾವು

ಬೀದ‌ರ : ತಾಲೂಕಿನ ಘೋಡಂಪಳ್ಳಿ ಗ್ರಾಮದ ಬಳಿ ಬುಧವಾರ (ಜು.2) ರಾತ್ರಿ 10ರ ಸುಮಾರಿಗೆ ಗೂಡ್ಸ್ ವಾಹನವೊಂದು ರಸ್ತೆ ಪಕ್ಕದ ಬಾವಿಗೆ ಉರುಳಿ, ಅದರಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ ಹಾಗೂ ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಮಗನ ಸಾವಿನ ಸುದ್ದಿ ತಿಳಿದು ವೃದ್ಧ ತಾಯಿ ಹೃದಯಾಘಾತದಿಂದ ಸಾವಿಗೀಡಾದ ಮನಕಲಕುವ ಘಟನೆ ನಡೆದಿದೆ ಎಂದು ವರದಿಯಾಗಿದೆ. … Continued

ವೀಡಿಯೊ…| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕಾರವಾರ (Karwar) ತಾಲೂಕಿನ ಕದ್ರಾ ಬಳಿಯ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಬಾಳೆಮನಿ, ಸುಳಗೇರಿ ಮಾರ್ಗವಾಗಿ ಕೂಡಸಳ್ಳಿ ಅಣೆಕಟ್ಟಿಗೆ ಹಾದುಹೋಗುವ ರಸ್ತೆಯ ಮೇಲೆಯೇ ಭಾರಿ ಪ್ರಮಾನದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 9ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಅರಬ್ಬೀ ಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು … Continued

ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ…! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

ಮುಂಬೈ:   ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಬ್ಬನನ್ನು 5 ಸ್ಟಾರ್‌ ಹೋಟೆಲ್‌ಗೆ ಕರೆದೊಯ್ದು ಅನೇಕ ಬಾರಿ ಲೈಂಗಿಕ ದೌರ್ಜಜ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮುಂಬೈಯ ಪ್ರತಿಷ್ಠಿತ ಶಾಲೆಯೊಂದರ 40 ವರ್ಷದ, ಇಂಗ್ಲಿಷ್‌ ಶಿಕ್ಷಕಿ ಕಳೆದೊಂದು ವರ್ಷದಿಂದ 16 ವರ್ಷದ ಬಾಲಕನ್ನು ಹೊಟೇಲ್‌ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾಳೆ. ಸದ್ಯ ಆಕೆಯನ್ನು … Continued

ಸ್ವಯಂ ನಿವೃತ್ತಿ ಪಡೆಯಲು ಮುಂದಾದ ಹೆಚ್ಚುವರಿ ಎಸ್‌ಪಿ ಎನ್.ವಿ.ಭರಮನಿ

ಬೆಳಗಾವಿ/ಧಾರವಾಡ: ಧಾರವಾಡ ಹೆಚ್ಚುವರಿ ಎಸ್‌ಪಿ ಎನ್.ವಿ. ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅವರು ಸ್ವಯಂ ನಿವೃತ್ತಿ ಕೋರಿ ಸುಮಾರು ಒಂದು ತಿಂಗಳ ಹಿಂದೆಯೇ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಸ್ವಯಂಪ್ರೇರಿತ ನಿವೃತ್ತಿಗೆ ಭರಮನಿ ಅವರು ಅರ್ಜಿ ಸಲ್ಲಿಸಿದ್ದರೂ ಈ ಬಗ್ಗೆ ಇಲಾಖೆ ಇನ್ನೂ ನಿರ್ಧರಿಸಬೇಕಿದೆ. ಹಿರಿಯ ಅಧಿಕಾರಿಗಳು ಸ್ವಯಂ … Continued