
ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಾಗಿದೆ. ಕಾರು, ಬೈಕ್ಗಳಿಗೆ ಬದಲಿ ಮಾರ್ಗ ಬಳಸಲು ಸೂಚಿಸಲಾಗಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದ್ದು, ಸ್ಥಳದಲ್ಲಿ ಅಧಿಕಾರಿಗಳು ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ತೆರವಿಗೆ ಕೆಲ ಗಂಟೆಗಳು ಬೇಕಾಗಬಹುದು.
ರಾಷ್ಟ್ರೀಯ ಹೆದ್ದಾರಿ .75 ರ ಧರ್ಮಸ್ಥಳ ಕ್ರಾಸ್ನಿಂದ ಸ್ವಲ್ಪ ಮುಂದೆಯೂ ಗುಡ್ಡ ಕುಸಿತ ಉಂಟಾಗಿದ್ದು, ಕಲ್ಲುಗಳು ರಸ್ತೆಗೆ ಬಂದು ಬಿದ್ದಿವೆ.



ನಿಮ್ಮ ಕಾಮೆಂಟ್ ಬರೆಯಿರಿ