ನವದೆಹಲಿ: ಉತ್ತರ ಪ್ರದೇಶದ ಮೀರತ್ನ ಟೋಲ್ ಬೂತ್ನಲ್ಲಿ ನಡೆದ ಘರ್ಷಣೆಯಲ್ಲಿ ಸೈನಿಕನೊಬಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ನಾಲ್ವರು ಟೋಲ್ ಬೂತ್ ಸಿಬ್ಬಂದಿ ಸೈನಿಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಆನ್ಲೈನ್ನಲ್ಲಿ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ.
ಸೈನಿಕ ಕಪಿಲ್ ಕವದ್ ಎಂಬವರು ಭಾರತೀಯ ಸೇನೆಯ ರಜಪೂತ್ ರೆಜಿಮೆಂಟ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ರಜೆಯ ನಿಮಿತ್ತ ಮನೆಗೆ ಬಂದಿದ್ದರು. ರಜೆ ಮುಗಿದ ನಂತರ ಶ್ರೀನಗರದಲ್ಲಿರುವ ತಮ್ಮ ಕಾರ್ಯಸ್ಥಳಕ್ಕೆ ಹೋಗಲು ದೆಹಲಿ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದರು. ಕಪಿಲ್ ಮತ್ತು ಅವರ ಸೋದರಸಂಬಂಧಿ ಜನದಟ್ಟಣೆಯಿದ್ದ ಭುನಿ ಟೋಲ್ ಬೂತ್ನಲ್ಲಿ ಸಿಲುಕಿಕೊಂಡರು. ವಿಮಾನಕ್ಕೆ ತಡವಾಗುತ್ತದೆ ಎಂದು ಆತಂಕಗೊಂಡ ಕಪಿಲ್ ಕಾರಿನಿಂದ ಇಳಿದು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಿದರು. ನಂತರ ವಾಗ್ವಾದ ಉಂಟಾಗಿ ಕನಿಷ್ಠ ಐದು ಟೋಲ್ ಬೂತ್ ಸಿಬ್ಬಂದಿ ಕಪಿಲ್ ಮತ್ತು ಅವರ ಸೋದರಸಂಬಂಧಿಯನ್ನು ಥಳಿಸಿದ್ದಾರೆ.
ಹಲ್ಲೆಯ ವೀಡಿಯೊದಲ್ಲಿ ಅವರು ಕಪಿಲ್ನನ್ನು ದೊಣ್ಣೆಯಿಂದ ಹೊಡೆಯುವುದು ಕಂಡುಬಂದಿದೆ. ನಂತರ ಕಪಿಲ್ ಅವರ ಕೈಗಳನ್ನು ಹಿಂದಕ್ಕೆ ಎಳೆದು ಕಂಬಕ್ಕೆ ಕಟ್ಟಿದ್ದಾರೆ. ಅವರಲ್ಲಿ ಒಬ್ಬರು ನಿಂದಿಸಿ ಸೈನಿಕನನ್ನು ಥಳಿಸಿದರು.
ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಕೇಶಕುಮಾರ ಮಿಶ್ರಾ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. “ಕಪಿಲ್ ಭಾರತೀಯ ಸೇನೆಯಲ್ಲಿದ್ದಾರೆ. ಅವರು ತಮ್ಮ ಕೆಲಸಕ್ಕೆ ಹಿಂತಿರುಗುತ್ತಿದ್ದರು. ಭುನಿ ಟೋಲ್ ಬೂತ್ನಲ್ಲಿ ಉದ್ದನೆಯ ಸರತಿ ಸಾಲು ಇತ್ತು. ಅವರು ಅವಸರದಲ್ಲಿದ್ದರು ಮತ್ತು ಟೋಲ್ ಬೂತ್ ಸಿಬ್ಬಂದಿಯೊಂದಿಗೆ ಮಾತನಾಡಿದರು. ವಾಗ್ವಾದ ಪ್ರಾರಂಭವಾಯಿತು ಮತ್ತು ಟೋಲ್ ಬೂತ್ ಸಿಬ್ಬಂದಿ ಅವರ ಮೇಲೆ ಹಲ್ಲೆ ನಡೆಸಿದರು.
ಅವರ ಕುಟುಂಬದವರ ದೂರಿನ ಮೇರೆಗೆ, ಸರೂರ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
“ಸಿಸಿಟಿವಿ ದೃಶ್ಯಾವಳಿಗಳು ಮತ್ತು ವೀಡಿಯೊಗಳನ್ನು ಸ್ಕ್ಯಾನ್ ಮಾಡಿದ ನಂತರ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಬಂಧಿಸಲು ಇನ್ನೂ ಎರಡು ತಂಡಗಳು ಕೆಲಸ ಮಾಡುತ್ತಿವೆ” ಎಂದು ಅವರು ಹೇಳಿದರು.
ಕೆಲವು ವರದಿಗಳ ಪ್ರಕಾರ, ಕಪಿಲ್ ತಮ್ಮ ಗ್ರಾಮವು ಟೋಲ್ ಶುಲ್ಕದಿಂದ ವಿನಾಯಿತಿ ಪಡೆದ ಪ್ರದೇಶದಲ್ಲಿದೆ ಎಂದು ಟೋಲ್ ಬೂತ್ ಸಿಬ್ಬಂದಿಗೆ ಹೇಳಿದಾಗ ವಾಗ್ವಾದ ಪ್ರಾರಂಭವಾಯಿತು. ಇದು ಸೈನಿಕನ ಮೇಲೆ ಹಲ್ಲೆಗೆ ಕಾರಣವಾಯಿತು.


ನಿಮ್ಮ ಕಾಮೆಂಟ್ ಬರೆಯಿರಿ