ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ.
ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲೂಕಿನ ಉಬರಡ್ಕದ ವಿನಯ ಕ್ಯಾಟರರ್ಸ್ ಮಾಲೀಕ ವಿನಯ ಯಾವಟೆ ಅವರಿಗೆ ಅದೃಷ್ಟ ತಂದುಕೊಟ್ಟಿತು. ವಿನಯ ಯಾವಟೆ ಕೇರಳ ಲಾಟರಿಯ 1 ಕೋಟಿ ರೂಪಾಯಿ ಬಂಪರ್ ಬಹುಮಾನ ತಮ್ಮದಾಗಿಸಿಕೊಂಡರು. ವಿನಯ ಕಾಸರಗೋಡಿನ ಪಂಜಿಕಲ್ಲು ಎಂಬಲ್ಲಿ ಟಿಕೆಟ್ ಖರೀದಿಸಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ